BREAKING : ‘195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರಕ್ಕೆ ಶಿಫಾರಸ್ಸು’ : ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು : 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.

ಇಂದು ರಾಜ್ಯ ಸಂಪುಟ ಸಮಿತಿಯ ಉಪ ಸಮಿತಿ ಸಭೆ ನಡೆಸಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಬಹಳ ದುರ್ಬಲವಾಗಿದೆ.  ಮೊದಲು ಬರ ಘೋಷಣೆ ಮಾಡುತ್ತೇವೆ, ನಂತರ ಪರಿಹಾರ ಘೋಷಣೆ ಮಾಡಲಿದ್ದೇವೆ. 113 ತಾಲೂಕುಗಳನ್ನು ಆಯ್ಕೆ ಮಾಡಿ ಸಮೀಕ್ಷೆಗೆ ಆದೇಶ ನೀಡಿದ್ದೇವೆ. ಎಲ್ಲಾ ಜಿಲ್ಲೆಗಳಿಂದಲೂ ಸಮೀಕ್ಷೆ ವರದಿ ಬಂದಿಲ್ಲ. 161 ತಾಲೂಕುಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದೆ. 34 ತಾಲೂಕುಗಳಲ್ಲಿ ಸಾಧಾರಣವಾಗಿದೆ. 195 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಘೋಷಣೆ ಮಾಡಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read