ಬಸ್‌ ಗೆ ಬೆಂಕಿ ತಗುಲಿ 20 ಪ್ರಯಾಣಿಕರು ಸಜೀವ ದಹನ, 16 ಜನರಿಗೆ ಗಾಯ; ಪ್ರಧಾನಿ ಪರಿಹಾರ ಘೋಷಣೆ

ಜೈಸಲ್ಮೇರ್: ರಾಜಸ್ಥಾನದಲ್ಲಿ ಮಂಗಳವಾರ ಮಧ್ಯಾಹ್ನ ಜೈಸಲ್ಮೇರ್‌ನಿಂದ ಜೋಧ್‌ಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಠಾತ್ತನೆ ಹೊತ್ತಿ ಉರಿದ ಪರಿಣಾಮ ಇಪ್ಪತ್ತು ಜನರು ಸಜೀವ ದಹನವಾಗಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಹತ್ತಿರದ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

57 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೈಸಲ್ಮೇರ್‌ನಿಂದ ಹೊರಟಿತ್ತು. ಜೈಸಲ್ಮೇರ್-ಜೋಧ್‌ಪುರ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಾಹನದ ಹಿಂಭಾಗದಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿ ಬೆಂಕಿ ಇಡೀ ಬಸ್ ಗೆ ವ್ಯಾಪಿಸಿತು ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read