ಬೆಳಗಾವಿ : 28 ಕೃಷ್ಣಮೃಗಗಳು ಏಕಾಏಕಿ ನಿಗೂಡ ವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ.ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ,
ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಜಿಂಕೆಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಜಿಂಕೆಗಳು ಸಾವನ್ನಪ್ಪಿವೆ . ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ನಡೆದಿದೆ.
ಮೊನ್ನೆ 8 ಜಿಂಕೆಗಳು ಸಾವನ್ನಪ್ಪಿದ್ದವು. ಇಂದು ಮತ್ತೆ 20 ಮೃತಪಟ್ಟಿವೆ.ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ,ಸಚಿವ ಈಶ್ವರ ಬಿ. ಖಂಡ್ರೆ ಅವರು ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.
