3 ನೇ ಪಟ್ಟಿಯಲ್ಲಿ ಟಿಕೆಟ್ ಸಿಕ್ಕೇ ಸಿಗುತ್ತೆ; ಅಖಂಡ ವಿಶ್ವಾಸ

ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯಲ್ಲಿಯೂ ಕೆಲ ಹಾಲಿ ಶಾಸಕರಿಗೆ ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಹಾಲಿ ಶಾಸಕರು ದೌಡಾಯಿಸಿದ್ದು, ಮೂರನೇ ಪಟ್ಟಿಯಲ್ಲಿ ಟಿಕೆಟ್ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಎರಡನೇ ಪಟ್ಟಿಯಲ್ಲಿ ಟಿಕೆಟ್ ಘೋಷಣೆಯಾಗದ ಕಾರಣಕ್ಕೆ ಕಂಗಾಲಾಗಿರುವ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ, ಸಿದ್ರಾಮಯ್ಯ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ. ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಖಂಡ ಶ್ರೀನಿವಾಸ್ ಮೂರ್ತಿ, ಮೂರನೆ ಪಟ್ಟಿಯಲ್ಲಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದಿದ್ದಾರೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಜಮೀರ್ ಅಹ್ಮದ್ ನನ್ನ ಬೆನ್ನಿಗೆ ನಿಂತಿದ್ದಾರೆ. ಮೂರನೆ ಪಟ್ಟಿಯಲ್ಲಿ ಟಿಕೆಟ್ ಸಿಗುವುದು ಖಚಿತ ಎಂದು ಹೇಳಿದರು. ನಾನು ಯಾವುದೇ ಪಕ್ಷಾಂತರ ಆಗುವ ಯೋಚನೆಯಿಲ್ಲ ಎರಡು ಪಟ್ಟಿಯಲ್ಲಿ ಟಿಕೆಟ್ ಸಿಗದಿರಲು ಕಾಣದ ಕೈಗಳ ಕೈವಾಡದ ಬಗ್ಗೆ ಮಾಹಿತಿ ಇಲ್ಲ. ಮೂರನೇ ಪಟ್ಟಿಯಲ್ಲಿ ನನಗೆ ಟಿಕೆಟ್ ಸಿಕ್ಕೇ ಸಿಗುತ್ತೇ ಎಂಬ ವಿಶ್ವಾಸವಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read