BREAKING : ಅರುಣಾಚಲ ಪ್ರದೇಶದಲ್ಲಿ ಟ್ರಕ್ ಕಂದಕಕ್ಕೆ ಉರುಳಿ ಮೂವರು ಯೋಧರು ಹುತಾತ್ಮ..!

ಇಟಾನಗರ: ಸೇನಾ ಟ್ರಕ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಯೋಧರು ಸಾವನ್ನಪ್ಪಿರುವ ಘಟನೆ ಅರುಣಾಚಲ ಪ್ರದೇಶದ ಸುಬಾನ್ಸಿರಿ ಜಿಲ್ಲೆಯಲ್ಲಿ ನಡೆದಿದೆ.

ಅರುಣಾಚಲ ಪ್ರದೇಶದ ದಪೋರಿಜೋದಿಂದ ಲೆಪರಾಡ ಜಿಲ್ಲೆಯ ಬಸರ್ ಗೆ ಸೇನಾ ಟ್ರಕ್ ಸಾಗುತ್ತಿತ್ತು. ಈ ವೇಳೆ ತಾಪಿ ಗ್ರಾಮದ ಅರುಣಾಚಲ ಪ್ರದೇಶ ಹೆದ್ದಾರಿಯಲ್ಲಿ ದುರಂತಕ್ಕೀಡಾದ ಟ್ರಕ್ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಮೂವರು ಯೋಧರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಮೃತರನ್ನು ಹವಾಲ್ದಾರ್ ಮಖತ್ ಸಿಂಗ್, ನಾಯ್ಕ್ ಮುಖೇಶ್ ಕುಮಾರ್, ಗ್ರೆನೇಡಿಯರ್ ಆಸಿಶ್ ಕುಮಾರ್ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಮೂವರು ಯೋಧರು ಸಾವನ್ನಪ್ಪಿರುವ ಘಟನೆ ಬಗ್ಗೆ ಮುಖ್ಯಮಂತ್ರಿ ಪೇಮಾ ಖಂಡು ತೀವ್ರ ಸಂತಾಪ ಸೂಚಿಸಿದ್ದಾರೆ. ಈ ಘಟನೆ ಅತ್ಯಂತ ದು:ಖತಂದಿದೆ. ರಾಷ್ಟ್ರಕ್ಕಾಗಿ ಅವರ ತ್ಯಾಗ ಹಾಗೂ ಸೇವೆಯನ್ನು ಸರ್ಕಾರ ಗೌರವಿಸುತ್ತದೆ ಎಂದು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read