BREAKING NEWS: ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಪ್ರಕರಣ: ಆರೋಪಿ ಅರೆಸ್ಟ್!

ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ.

ಮಾದ ಅಲಿಯಾಸ್ ಮಾದುರಾಜು ಬಂಧಿತ ಆರೋಪಿ. ತನ್ನ ಹಸುವನ್ನು ಹುಲಿ ಕೊಂದಿದ್ದಕ್ಕೆ ತಾನೇ ವಿಷ ಹಾಕಿ ಹುಲಿಯನ್ನು ಕೊಂದಿರುವುದಾಗಿ ಮಾದನ ತಂದೆ ಶಿವಣ್ಣ ಹೇಳಿಕೆ ನೀಡಿದ್ದರು. ಪುತ್ರನನ್ನು ರಕ್ಷಿಸುವ ಸಲುವಾಗಿ ತಾನು ಹುಲಿ ಸಾಯಿಸಿದ್ದಾಗಿ ಹೇಳಿದ್ದರು. ಆದರೆ ಅನುಮಾನಗೊಂಡು ತೀವ್ರ ವಿಚಾರಣೆ ನಡೆಸಿದಾಗ ಶಿವಣ್ಣನ ಪುತ್ರ ಮಾದ ಅಲಿಯಾಸ್ ಮಾದುರಾಜು ಐದು ಹುಲಿಗಳ ಸಾವಿಗೆ ತಾನು ಕಾರಣ. ತಾನೇ ವಿಷಹಾಕಿ ಕೊಂದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಈ ಹಿನ್ನೆಲೆಯಲ್ಲಿ ಮಾದ ಅಲಿಯಾಸ್ ಮಾದುರಾಜುನನ್ನು ಪೊಲೀಸರು ಬಂಧಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಿಂದಲೂ ವಿಚಾರಣೆ ನಡೆಯುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read