BREAKING: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದಲ್ಲಿ 5ನೇ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 5ನೇ ಆರೋಪಿಯನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಶೋಯೆಬ್ ಅಹಮದ್ ಮಿರ್ಜಾ ಅಲಿಯಾಸ್ ಚೋಟು(35) ಬಂಧಿತ ಆರೋಪಿ. ಎಲ್ಇಟಿ ಪಿತೂರಿ ಪ್ರಕರಣದಲ್ಲಿಯೂ ಶೋಯೆಬ್ ಶಿಕ್ಷೆಗೆ ಒಳಗಾಗಿದ್ದ.

ಕಳೆದ ಫೆಬ್ರವರಿ 29 ರಂದು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಆಗಿತ್ತು. ಪ್ರಕರಣದ ತನಿಖೆ ಕೈಗೊಂಡ ಎನ್ಐಎ ಅಧಿಕಾರಿಗಳು ಈಗಾಗಲೇ ನಾಲ್ವರನ್ನು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ತನಿಖೆ ಚುರುಕುಗೊಳಿಸಿದ ಎನ್ಐಎ ಅಧಿಕಾರಿಗಳು ಶಂಕಿತರ ಮಾಹಿತಿ ಕಲೆ ಹಾಕಿದ್ದರು. ಬಾಂಬ್ ಸ್ಪೋಟದ ಸಂಚು ಮತ್ತು ಪರಾರಿಯಾದ ಬಗ್ಗೆ ಇಬ್ಬರು ಶಂಕಿತರು ಕೋಡ್ ವರ್ಡ್ ಮೂಲಕ ಸಂಭಾಷಣೆ ನಡೆಸಿದ ಪುರಾವೆಗಳನ್ನು ಸಂಗ್ರಹಿಸಿದ ಅಧಿಕಾರಿಗಳು ಶೋಯೆಬ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read