5, 8ನೇ ತರಗತಿಯಲ್ಲಿ ಫೇಲ್ ಮಾಡುವ ನೀತಿ ರಾಜ್ಯದಲ್ಲಿ ಜಾರಿಗೊಳಿಸದಂತೆ ಆಗ್ರಹ

ಬೆಂಗಳೂರು: 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ನಂತರ ಮರು ಪರೀಕ್ಷೆಯಲ್ಲಿಯೂ ಫೇಲಾದ ಮಕ್ಕಳನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ತಡೆ ಹಿಡಿಯಲು ಕೇಂದ್ರ ಸರ್ಕಾರ ಜಾರಿಗೊಳಿಸಿದ ನಿಯಮವನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಬಾರದು ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಂದೋಲನಗಳ ಸಮನ್ವಯ(ಫಾಫ್ರೆ) ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ಪತ್ರ ಬರೆದಿರುವ ಫಾಫ್ರೆ ಪ್ರಧಾನ ಸಂಚಾಲಕ ಮತ್ತು ಶಿಕ್ಷಣ ತಜ್ಞ ವಿ.ಪಿ. ನಿರಂಜನಾರಾಧ್ಯ ಯುಪಿಎ ಜಾರಿಗೆ ತಂದ ಆರ್‌ಟಿಇ ನೀತಿ 8ನೇ ತರಗತಿವರೆಗೆ ಯಾವುದೇ ಮಕ್ಕಳನ್ನು ಒಂದೇ ತರಗತಿಯಲ್ಲಿ ತಡೆ ಹಿಡಿಯುವುದಾಗಲಿ ಅನುತ್ತೀರ್ಣಗೊಳಿಸುವುದನ್ನಾಗಲಿ ನಿಷೇಧಿಸಲಾಗಿತ್ತು. ಮಕ್ಕಳು ಶಾಲೆಯಿಂದ ಹೊರಗುಳಿಯುವುದನ್ನು ತಪ್ಪಿಸಲು ಈ ಕಾಯ್ದೆ ತರಲಾಗಿತ್ತು. ಈಗ ಸರ್ಕಾರದ ನೀತಿಯು ಆರ್‌ಟಿಇ ಮೂಲ ಉದ್ದೇಶಕ್ಕೆ ವಿರುದ್ಧವಾಗಿದ್ದು, ಇದನ್ನು ರಾಜ್ಯದಲ್ಲಿ ತಿರಸ್ಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read