BIG NEWS: ಶರಣಾದ 6 ನಕ್ಸಲರು ಪೊಲೀಸ್ ಕಸ್ಟಡಿಗೆ, ಇಂದಿನಿಂದ ವಿಚಾರಣೆ

ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 6 ಮಂದಿ ನಕ್ಸಲರು ಇತ್ತೀಚೆಗೆ ಶರಣಾಗತಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ನ್ಯಾಯಾಲಯ 6 ನಕ್ಸಲರನ್ನು ಪೊಲೀಸ್ ವಶಕ್ಕೆ ನೀಡಿದೆ.

ಜನವರಿ 23ರ ವರೆಗೆ ನಕ್ಸಲರನ್ನು ಪೊಲೀಸ್ ವಶಕ್ಕೆ ನೀಡಿದ್ದು, ಇಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರು ನಕ್ಸಲರನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.

ಚಿಕ್ಕಮಗಳೂರು ಎಸ್ಪಿ ನೇತೃತ್ವದಲ್ಲಿ ಇಂದು ನಕ್ಸಲರ ವಿಚಾರಣೆ ನಡೆಸಲಾಗುವುದು. ಶರಣಾಗತರಾಗಿರುವ ಮುಂಡಗಾರು ಲತಾ, ಸುಂದರಿ, ವನಜಾಕ್ಷಿ, ಜಯಣ್ಣ, ಜೀಶಾ, ವಸಂತ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು. ಶಸ್ತ್ರಾಸ್ತ್ರ ಸೇರಿದಂತೆ ಹಳೆಯ ಪ್ರಕರಣಗಳ ಕುರಿತಾಗಿ ವಿಚಾರಣೆ ನಡೆಯಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read