ಕೇವಲ 24 ಗಂಟೆ ಅವಧಿಯಲ್ಲಿ 6000 ಕೋಟಿ ರೂ. ಮೊತ್ತದ 1,830 ಟೆಂಡರ್ ಕರೆದ ಸರ್ಕಾರ: ಆಮ್ ಆದ್ಮಿ ಪಕ್ಷ ಆರೋಪ

ಬೆಂಗಳೂರು: ಕೇವಲ 24 ಗಂಟೆಗಳ ಅಂತರದಲ್ಲಿ ರಾಜ್ಯ ಸರ್ಕಾರ 1830 ಟೆಂಡರ್ ಗಳಿಗೆ ಆಹ್ವಾನ ನೀಡಿ ಕೆಲವೇ ದಿನಗಳ ಕಾಲಾವಕಾಶ ನೀಡಿರುವುದಾಗಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆರೋಪಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪೃಥ್ವಿ ರೆಡ್ಡಿ ಅವರು ಈ ಸಂಬಂಧ 462 ಪುಟಗಳ ದಾಖಲೆ ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ 24ರ ಬೆಳಿಗ್ಗೆ 2.30 ರಿಂದ ಫೆಬ್ರವರಿ 25ರ ಬೆಳಿಗ್ಗೆ 2.30 ರ ನಡುವೆ ಕೇವಲ 24 ಗಂಟೆಗಳ ಅವಧಿಯಲ್ಲಿ 6000 ಕೋಟಿ ರೂಪಾಯಿ ಮೊತ್ತದ 1830 ಅಲ್ಪಾವಧಿ ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ.

ಒಟ್ಟು 15 ರಿಂದ 20 ಸಾವಿರ ಕೋಟಿ ರೂಪಾಯಿ ಮೊತ್ತದ ವಿವಿಧ ಟೆಂಡರ್ ಕರೆದ ಮಾಹಿತಿ ಇದೆ. ಇದರಲ್ಲಿ 6 ಸಾವಿರ ಕೋಟಿ ರೂಪಾಯಿ ಮೊತ್ತದ ಟೆಂಡರ್ ಗಳ ಮಾಹಿತಿ ಮಾತ್ರ ಸಿಕ್ಕಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಇಷ್ಟೊಂದು ಅಲ್ಪಾವಧಿ ಟೆಂಡರ್ ಕರೆಯುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read