ಬೆಂಗಳೂರು: ರಾಜ್ಯದಲ್ಲಿ ಇಂದು 61 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 955 ಕ್ಕೆ ಏರಿಕೆಯಾಗಿದೆ.
ಇವತ್ತು ನಾಲ್ವರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 523 ಜನ ಗುಣಮುಖರಾಗಿದ್ದಾರೆ. 423 ಸಕ್ರಿಯ ಪ್ರಕರಣಗಳಿದ್ದು, 7 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳ ಅವಧಿಯಲ್ಲಿ 325 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ ಶೇಕಡ 18.7ರಷ್ಟು ಇದೆ. ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಇದುವರೆಗೆ 9 ಜನ ಮೃತಪಟ್ಟಿದ್ದಾರೆ. ಇಂದು ಯಾವುದೇ ಸಾವು ಸಂಭವಿಸಿಲ್ಲ.
