ರಾಜ್ಯದ ಇನ್ನೂ 7 ತಾಲೂಕುಗಳು `ಬರಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ರಾಜ್ಯದ 7 ತಾಲೂಕುಗಳನ್ನು ಹೆಚ್ಚುವರಿ ಬರಪೀಡಿತ ತಾಲೂಕುಗಳೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ.ಈ ಮೂಲಕ ಒಟ್ಟು ಬರ ಪೀಡಿತ ತಾಲೂಕುಗಳ ಸಂಖ್ಯೆ 223 ಕ್ಕೆ ಏರಿಕೆಯಾಗಿದೆ.

ಹೌದು, ಬರ ಪೀಡಿತ ತಾಲೂಕುಗಳ ಪಟ್ಟಿಗೆ ಮತ್ತೆ ಏಳು ತಾಲೂಕುಗಳ ಸೇರ್ಪಡೆ ಮಾಡಿದ್ದು, ಬೀದರ್ ಜಿಲ್ಲೆಯ ಔರಾದ್, ಬೀದರ್, ಚಿಟಗುಪ್ಪಾ, ಹುಮ್ನಾಬಾದ್, ಕಮಲನಗರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು, ವಿಜಯಪುರ ಜಿಲ್ಲೆಯ ತಿಕೋಟಾವನ್ನು ಸೇರ್ಪಡೆಗೊಳಿಸಿ ಕಂದಾಯ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಉಸ್ತುವಾರಿ ಜಿಲ್ಲೆಗಳಿಗೆ ಭೇಟಿ ನೀಡಿ ನವೆಂಬರ್ 15 ರೊಳಗೆ ವರದಿ ಸಲ್ಲಿಸುವಂತೆ ಎಲ್ಲಾ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಹೊರಡಿಸಿದ್ದಾರೆ.

ಮುಂದಿನ ಎರಡು ವಾರಗಳವರೆಗೆ ರಾಜ್ಯದಲ್ಲಿನ ಬರ ಪರಿಹಾರ ಕಾರ್ಯಗಳನ್ನು ಪರಿಶೀಲಿಸಿ ನವೆಂಬರ್ 15 ರೊಳಗೆ ವರದಿ ಸಲ್ಲಿಸುವಂತೆ ಸಿಎಂ ಎಲ್ಲಾ ಸಚಿವರಿಗೆ ಸೂಚಿಸಿದ್ದಾರೆ. ನಿವಾಸಿಗಳು ಮತ್ತು ಪ್ರಾಣಿಗಳಿಗೆ ಸಾಕಷ್ಟು ಕುಡಿಯುವ ನೀರಿನ ಸೌಲಭ್ಯಗಳು, ನೀರಾವರಿಗೆ ನೀರು, ಉದ್ಯೋಗ ಸ್ಥಿತಿ, ಬೆಳೆ ನಷ್ಟ ಮತ್ತು ಇತರ ಬರ ಪರಿಹಾರ ಕಾರ್ಯಗಳನ್ನು ನೋಡಲು ವಿವಿಧ ಪ್ರದೇಶಗಳನ್ನು ಪರಿಶೀಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಆದೇಶದಲ್ಲಿ ನಿರ್ದೇಶಿಸಲಾಗಿದೆ.ಈ ಹಿಂದೆ ಬರ ಪರಿಹಾರ ಕಾಮಗಾರಿ ಆರಂಭಿಸುವಂತೆ ಸಚಿವ ಸಂಪುಟ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತ್ತು. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಆದೇಶಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read