BREAKING : ‘ಸಿಎಂ ಸಿದ್ದರಾಮಯ್ಯ’ಗೆ 7 ನೇ ವೇತನ ಆಯೋಗದ ವರದಿ ಸಲ್ಲಿಕೆ, ಶೀಘ್ರವೇ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್..?

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಇಂದು 7 ನೇ ವೇತನದ ಆಯೋಗದ ವರದಿ ಸಲ್ಲಿಕೆ ಮಾಡಲಾಗಿದೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ 7 ನೇ ವೇತನದ ಆಯೋಗದ ವರದಿ ಸಲ್ಲಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯಮಂತ್ರಿ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ರಾಜ್ಯ 7 ನೇ ವೇತನ ಆಯೋಗದ ವರದಿ ಸಲ್ಲಿಕೆ ಮಾಡಲಾಗುತ್ತಿದೆ. 7 ನೇ ವೇತನದ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರು ವರದಿ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ 7 ನೇ ವೇತನ ಆಯೋಗದ ವರದಿ ಸಲ್ಲಿಕೆ ಮಾಡಲಾಗಿದ್ದು, ಇದನ್ನು ಪರಿಶೀಲಿಸಿ ಸರ್ಕಾರ ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

ನಂತರ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘‘ಇಂದು 7 ನೇ ವೇತನ ಆಯೋಗದ ವರದಿ ಪಡೆದಿದ್ದೇನೆ, ಶೇ.27 ರಷ್ಟು ವೇತನ ಹೆಚ್ಚಳ ಮಾಡಬೇಕೆಂದು ಮನವಿ ಮಾಡಿದ್ದಾರೆ. ಇದನ್ನು ಆರ್ಥಿಕ ಇಲಾಖೆಯವರು ಪರಿಶೀಲನೆ ಮಾಡಲಿದ್ದಾರೆ’ ಎಂದರು.ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಇದಕ್ಕೆ ಗ್ರೀನ್ ಸಿಗ್ನಲ್ ಕೊಡುವ ಸಾಧ್ಯತೆಯಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read