alex Certify ರಾಜ್ಯಕ್ಕೆ ಮತ್ತೊಂದು ರೈಲು: ಶಿವಮೊಗ್ಗ- ಚೆನ್ನೈ ಸೂಪರ್ ಫಾಸ್ಟ್ ರೈಲು ಸಂಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಮತ್ತೊಂದು ರೈಲು: ಶಿವಮೊಗ್ಗ- ಚೆನ್ನೈ ಸೂಪರ್ ಫಾಸ್ಟ್ ರೈಲು ಸಂಚಾರ

ಬೆಂಗಳೂರು: ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ- ಚೆನ್ನೈ ನಡುವೆ ಸಂಚಾರ ಆರಂಭಿಸಲಿದೆ.

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚೆನ್ನೈ ಮತ್ತು ಸತ್ಯಸಾಯಿ ಪ್ರಶಾಂತಿ ನಿಲಯಂ ನಡುವೆ ಸಂಚರಿಸುತ್ತಿದ್ದ ರೈಲು ಸಂಖ್ಯೆ 12691/2 ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಚೆನ್ನೈ ಮತ್ತು ಶಿವಮೊಗ್ಗ ನಡುವೆ ಸಂಚರಿಸುವಂತೆ ಮಾರ್ಗ ಬದಲಾವಣೆ ಮಾಡಲಾಗಿದೆ.

ಈ ಮೂಲಕ ತುಮಕೂರು ಭಾಗದ ಜನರಿಗೆ ಚೆನ್ನೈಗೆ ನೇರ ಪ್ರಯಾಣ ಬೆಳೆಸುವ ಅವಕಾಶ ದೊರೆತಿದೆ. ಈ ರೈಲನ್ನು ತುಮಕೂರು, ಅರಸೀಕೆರೆ, ಕಡೂರು, ಬೀರೂರು, ತರೀಕೆರೆ, ಭದ್ರಾವತಿಯಲ್ಲಿ ನಿಲುಗಡೆ ಮಾಡಲಾಗುವುದು. ಚೆನ್ನೈನಿಂದ ಪ್ರತಿ ಶುಕ್ರವಾರ ರಾತ್ರಿ 11:30 ಕ್ಕೆ ನಿರ್ಗಮಿಸುವ ರೈಲು ಶನಿವಾರ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ ಪ್ರತಿ ಶನಿವಾರ ಸಂಜೆ 4 ಗಂಟೆಗೆ ಹೊರಡುವ ರೈಲು ಬೆಳಗಿನ ಜಾವ 4:55 ಕ್ಕೆ ಚೆನ್ನೈ ತಲುಪಲಿದೆ ಎಂದು ಸೋಮಣ್ಣ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...