alex Certify ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ : ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು 2ನೇ ಪಿ.ಯು.ಸಿ. ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ಕರ್ನಾಟಕ ಮೂಲನಿವಾಸಿ ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿನ್ನು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ:30/10/2024 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕ ಡಾ. ಸಿ.ಎ.ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಇಲಾಖಾ ಕಚೇರಿ ದೂ.ಸಂ.: 08182-220925ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...