alex Certify ಮಹಾಮಳೆಗೆ ಮುಂಬೈ ತತ್ತರ ; ರೈಲು-ವಿಮಾನ ಸಂಚಾರ ಬಂದ್, ಜನ ಜೀವನ ಅಸ್ತವ್ಯಸ್ತ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಾಮಳೆಗೆ ಮುಂಬೈ ತತ್ತರ ; ರೈಲು-ವಿಮಾನ ಸಂಚಾರ ಬಂದ್, ಜನ ಜೀವನ ಅಸ್ತವ್ಯಸ್ತ..!

ಮುಂಬೈ : ಭಾನುವಾರ ಸುರಿದ ಭಾರಿ ಮಳೆಯಿಂದಾಗಿ ಮುಂಬೈ ನಲುಗಿ ಹೋಗಿದೆ. ಸ್ಥಳೀಯ ರೈಲು ಸೇವೆಗಳು ಮತ್ತು ವಿಮಾನ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ಒಟ್ಟಾರೆ ಜನಜೀವನ ಅಸ್ತವ್ಯಸ್ತವಾಗಿದೆ.

ರಾತ್ರಿಯಿಡೀ ಸುರಿದ ಭಾರಿ ಮಳೆ ಈ ವಾರವೂ ಮುಂದುವರಿಯುವ ನಿರೀಕ್ಷೆಯಿದೆ. ಜುಲೈ 8 ರಂದು ಮುಂಬೈನಲ್ಲಿ ದಿನವಿಡೀ ಮಧ್ಯಮದಿಂದ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮುಂಬೈನ ದಿಂಡೋಶಿಯಲ್ಲಿ ಸೋಮವಾರ ಮುಂಜಾನೆ ಭಾರಿ ಮಳೆ ಮುಂದುವರಿದಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿವೆ ಎಂದು ಸ್ಥಳೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಜುಲೈ 8 ರಿಂದ ಜುಲೈ 10, 2024 ರವರೆಗೆ ಮಧ್ಯ ಮಹಾರಾಷ್ಟ್ರ ಮತ್ತು ಮರಾಠಾವಾಡಾ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

ಮುಂಬೈ : ಭಾನುವಾರ ಸುರಿದ ಭಾರಿ ಮಳೆಯಿಂದಾಗಿ ಮುಂಬೈ ನಲುಗಿ ಹೋಗಿದೆ. ಸ್ಥಳೀಯ ರೈಲು ಸೇವೆಗಳು ಮತ್ತು ವಿಮಾನ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದು, ಒಟ್ಟಾರೆ ಜನಜೀವನ ಅಸ್ತವ್ಯಸ್ತವಾಗಿದೆ.
ರಾತ್ರಿಯಿಡೀ ಸುರಿದ ಭಾರಿ ಮಳೆ ಈ ವಾರವೂ ಮುಂದುವರಿಯುವ ನಿರೀಕ್ಷೆಯಿದೆ. ಜುಲೈ 8 ರಂದು ಮುಂಬೈನಲ್ಲಿ ದಿನವಿಡೀ ಮಧ್ಯಮದಿಂದ ಭಾರಿ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮುಂಬೈನ ದಿಂಡೋಶಿಯಲ್ಲಿ ಸೋಮವಾರ ಮುಂಜಾನೆ ಭಾರಿ ಮಳೆ ಮುಂದುವರಿದಿದ್ದು, ಅನೇಕ ಪ್ರದೇಶಗಳು ಜಲಾವೃತಗೊಂಡಿವೆ ಎಂದು ಸ್ಥಳೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಜುಲೈ 8 ರಿಂದ ಜುಲೈ 10, 2024 ರವರೆಗೆ ಮಧ್ಯ ಮಹಾರಾಷ್ಟ್ರ ಮತ್ತು ಮರಾಠಾವಾಡಾ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...