alex Certify ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ 1 ತಿಂಗಳು |Actor Darshan Arrested | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ 1 ತಿಂಗಳು |Actor Darshan Arrested

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ ಇಂದಿಗೆ 1 ತಿಂಗಳು ಆಗಿದ್ದು, ಜೈಲಿನಲ್ಲಿ ದಾಸ ಚಡಪಡಿಸುತ್ತಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೂನ್ 11 ರಂದು ಬಂಧನಕ್ಕೊಳಗಾಗಿದರು. ಅಂದಿನಿಂದ ಇಂದಿನವರೆಗೂ ದರ್ಶನ್ ಸೆರೆಮನೆ ವಾಸ ಅನುಭವಿಸುತ್ತಿದ್ದಾರೆ.

ಇತ್ತೀಚೆಗೆ ಜೈಲಿಗೆ ಭೇಟಿ ನೀಡಿದ ಮಗ ಹಾಗೂ ಹೆಂಡತಿಯನ್ನು ಕಂಡು ದರ್ಶನ್ ಖುಷಿಯಾಗಿದ್ದರು. ಇದಾದ ಬಳಿಕ ನಟ ದರ್ಶನ್ ಮತ್ತೆ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ,

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 2023 ನವೆಂಬರ್ ನಿಂದ 2024 ಅಕ್ಟೋಬರ್ ವರೆಗೆ ಅವರ ಕುಜ ಭುಕ್ತಿ ಇದೆ. ಅಕ್ಟೋಬರ್ ನಂತರ ಅವರ ಜೀವನ ಚೇಂಜ್ ಆಗುತ್ತದೆ. ಅಕ್ಟೋಬರ್ 28 ರವರೆಗೆ ಅವರಿಗೆ ಜಾಮೀನು ಸಿಗಲ್ಲ. ಆಮೇಲೆ ಅವರ ಜೀವನ ಬದಲಾಗುತ್ತದೆ ಎಂದು ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆ ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ನಟ ದರ್ಶನ್ & ಗ್ಯಾಂಗ್ ಬರ್ಬರವಾಗಿ ಕೊಂದಿದೆ ಎಂಬ ಆರೋಪವಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...