alex Certify ಸಿಆರ್ ಪಿಎಫ್, ಪೊಲೀಸ್ ಪಡೆ ಮೇಲೆ ದುಷ್ಕರ್ಮಿಗಳ ದಾಳಿ; ಓರ್ವ ಯೋಧ ಹುತಾತ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಆರ್ ಪಿಎಫ್, ಪೊಲೀಸ್ ಪಡೆ ಮೇಲೆ ದುಷ್ಕರ್ಮಿಗಳ ದಾಳಿ; ಓರ್ವ ಯೋಧ ಹುತಾತ್ಮ

ಸಿಆರ್ ಪಿಎಫ್ ಹಾಗೂ ಪೊಲಿಸ್ ಪಡೆ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಯೋಧ ಹುತಾತ್ಮರಾಗಿರುವ ಘಟನೆ ಮಣಿಪುರದ ಜಿರಿಬಾಮ್ ನಲ್ಲಿ ನಡೆದಿದೆ.

ದುಷ್ಕರ್ಮಿಗಳು ಸಿಆರ್ ಪಿಎಫ್ ಹಾಗೂ ಪೊಲೀಸ್ ಪಡೆಗಳ ಮೇಲೆ ಹೊಂಚು ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಯೋಧ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಪೊಲಿಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ಜುಲೈ 13ರಂದು ನಡೆದಿದ್ದ ಗುಂಡಿನ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ 20 ಬೆಟಾಲಿಯನ್ ಸಿಆರ್ ಪಿಎಫ್ ಹಾಗೂ ಜಿರಿಬಾಮ್ ಜಿಲ್ಲಾ ಪೊಲೀಸ್ ತಂಡ ಜಂತಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಮೃತ ಯೋಧನನ್ನು ಬಿಹಾರ ಮೂಲದ ಅಜಯ್ ಕುಮಾರ್ ಎಂದು ಗುರುತಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...