alex Certify ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: HDK ಅಭಿನಂದನಾ ಸಮಾರಂಭದಲ್ಲಿ ನಾರಾಯಣಗೌಡ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನ: HDK ಅಭಿನಂದನಾ ಸಮಾರಂಭದಲ್ಲಿ ನಾರಾಯಣಗೌಡ ಹೊಸ ಬಾಂಬ್

ಮಂಡ್ಯ: ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಪಾಂಡವಪುರ ಮಾಜಿ ಶಾಸಕ ಕೆ.ಸಿ. ನಾರಾಯಣಗೌಡ ಹೊಸ ಬಾಂಬ್ ಸಿಡಿಸಿದ್ದಾರೆ.

ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ನಡೆದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನಾರಾಯಣಗೌಡ, ಕುಮಾರಣ್ಣ ಮಂಡ್ಯ ಜಿಲ್ಲೆಗೆ ದೊಡ್ಡ ಶಕ್ತಿಯಾಗಿದ್ದಾರೆ. ಕಾಂಗ್ರೆಸ್ ಸರ್ಕಾರ ತೆಗೆಯುವ ಕೆಲಸ ಶೀಘ್ರವೇ ನಡೆಯಲಿದೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಕಾಂಗ್ರೆಸ್ ಸರ್ಕಾರ ತೆಗೆಯುತ್ತೇವೆ ಎಂದು ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ನಾರಾಯಣ ಗೌಡ, ಸಿದ್ದರಾಮಯ್ಯ ನಾನು ಸತ್ಯ ಹರಿಶ್ಚಂದ್ರ ಎಂದು ಹೇಳಿಕೊಳ್ಳುತ್ತಾರೆ. 15 ಸೈಟುಗಳು ಯಾರದ್ದು ಸ್ವಾಮಿ ಎಂದು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಸರ್ಕಾರದ ಹಗರಣಗಳು ಬಹಳಷ್ಟು ಇವೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ನೂರಾರು ಕೋಟಿ ಲೂಟಿ ಮಾಡಿದ್ರಲ್ಲ, ಹಣ ಲೂಟಿ ಮಾಡುವಾಗ ನೀವು ಕಣ್ಮುಚ್ಚಿ ಕುಳಿತಿದ್ರಾ ಸ್ವಾಮಿ? ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...