BREAKING: ರಾಜಧಾನಿ ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಗಳೂರಿನ ವಿಜ್ಞಾನ ನಗರದಲ್ಲಿ ಫರ್ನಿಚರ್ ಶಾಪ್ ನಲ್ಲಿ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ.

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿಜ್ಞಾನ ನಗರದ ಬಸ್ ನಿಲ್ದಾಣದ ಬಳಿ ಇರುವ ಶಿವರಾಜನ್ ಎಂಬುವರ ಫರ್ನಿಚರ್ ಶಾಪ್ ಬೆಂಕಿಗಾಹುತಿಯಾಗಿದೆ. ನಿನ್ನೆ ರಾತ್ರಿ ಶಾಪ್ ಕ್ಲೋಸ್ ಮಾಡಿದ ಬಳಿಕ ಅಗ್ನಿ ಅವಘಡ ಸಂಭವಿಸಿದ್ದು, ಮಾಹಿತಿ ತಿಳಿದು ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೈಯ್ಯಪ್ಪನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದೆಂದು ಹೇಳಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read