ದಾಖಲೆಯಿಲ್ಲದೆ ಗ್ರಾಮ ಲೆಕ್ಕಾಧಿಕಾರಿ ಸಾಗಿಸುತ್ತಿದ್ದ 1.10 ಕೋಟಿ ರೂ. ವಶಕ್ಕೆ

ಬೆಳಗಾವಿ: ರಾಮದುರ್ಗ ತಾಲೂಕಿನ ಹಲಗತ್ತಿ ಚೆಕ್ ಪೋಸ್ಟ್ ಬಳಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಯಾವುದೇ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ರಾಮದುರ್ಗ ಠಾಣೆ ಪೋಲಿಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ನಿಪ್ಪಾಣಿಯ ಗ್ರಾಮ ಲೆಕ್ಕಾಧಿಕಾರಿ ರಾಮದುರ್ಗ ತಾಲೂಕಿನ ಹೊಸೂರು ಗ್ರಾಮದ ವಿಠಲ ಢವಳೇಶ್ವರ ಅವರು ತಮ್ಮ ಕಾರ್ ನಲ್ಲಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದರು. ರಾಮದುರ್ಗ ಮಾರ್ಗವಾಗಿ ಬಾಗಲಕೋಟೆ ಕಡೆಗೆ ಅವರು ಹಣದೊಂದಿಗೆ ತೆರಳುತ್ತಿದ್ದ ಖಚಿತ ಮಾಹಿತಿ ಆಧರಿಸಿ ಕಾರ್ ಪರಿಶೀಲಿಸಿದಾಗ 1,10,62,900 ರೂಪಾಯಿ ನಗದು ದೊರೆತಿದೆ.

ಪೊಲೀಸರು ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ಸಹಾಯಕ ನಿರ್ದೇಶಕ ಅಮಿತ್ ಶಿಂಧೆ ಪರಿಶೀಲನೆ ನಡೆಸಿದ್ದಾರೆ. ರಾಮದುರ್ಗ ಡಿವೈಎಸ್ಪಿ ಎಂ. ಪಾಂಡುರಂಗಯ್ಯ, ಸಿಪಿಐ ಈರಣ್ಣ ನೇತೃತ್ವದ ತಂಡ ದಾಳಿ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read