ಸುರಕ್ಷತಾ ಕ್ರಮ ಕೈಗೊಳ್ಳದೆ ಮ್ಯಾನ್ ಹೋಲ್ ಗೆ ಕಾರ್ಮಿಕರ ಇಳಿಸಿ ಸ್ವಚ್ಛತೆ: ಅಧಿಕಾರಿಗಳ ವಿರುದ್ಧ ಎಫ್ಐಆರ್

ಶಿವಮೊಗ್ಗ: ಭದ್ರಾವತಿ ನಗರದ ವಿಐಎಸ್ಎಲ್ ವ್ಯಾಪ್ತಿಯಲ್ಲಿ ಯುಜಿಡಿ ಮ್ಯಾನ್ ಹೊಲ್ ಗೆ ಕಾರ್ಮಿಕರನ್ನು ಇಳಿಸಿದ ವ್ಯಕ್ತಿಗಳ ವಿರುದ್ಧ ಭದ್ರಾವತಿ ನ್ಯೂಟೌನ್ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಿಐಎಸ್ಎಲ್ ಟೌನ್ ಶಿಪ್ ಅಧಿಕಾರಿ ಮೋಹನ ಶೆಟ್ಟಿ, ಸೂಪರ್ ವೈಸರ್ ಓಂಕಾರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಾಲಭಾರತಿ ಸಮೀಪ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೆ ಮೂವರು ಕಾರ್ಮಿಕರನ್ನು ಮ್ಯಾನ್ ಹೋಲ್ ಗೆ ಇಳಿಸಿ ಸ್ವಚ್ಛಗೊಳಿಸಲಾಗಿತ್ತು.

ಈ ಸಂಬಂಧ ಟೌನ್ ಶಿಪ್ ಮ್ಯಾನೇಜರ್ ವಿರುದ್ಧ ನಗರಸಭೆ ಆಯುಕ್ತ ಪ್ರಕಾಶ್ ಚನ್ನಪ್ಪನವರ ದೂರು ನೀಡಿದ್ದಾರೆ. ಮೋಹನ್ ಶೆಟ್ಟಿ ಮತ್ತು ಓಂಕಾರಪ್ಪ ಸೂಚನೆ ಮೇರೆಗೆ ಯಾವುದೇ ಸುರಕ್ಷತೆ ಇಲ್ಲದೆ ಕಾರ್ಮಿಕರು ಸ್ವಚ್ಛಗೊಳಿಸಿದ್ದಾರೆ ಎಂದು ಹೇಳಲಾಗಿದೆ. ನಗರಸಭೆ ಪರಿಸರ ವಿಭಾಗ ಇಂಜಿನಿಯರ್ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read