alex Certify ಪ್ರಧಾನ ಮಂತ್ರಿ ‘ಮತ್ಸ್ಯ ಸಂಪದ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನ ಮಂತ್ರಿ ‘ಮತ್ಸ್ಯ ಸಂಪದ’ ಯೋಜನೆಯಡಿ ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಡಿಜಿಟಲ್ ಡೆಸ್ಕ್ : ಮೀನುಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯಸಂಪದ (ಪಿಎಂಎಂಎಸ್ವೈ) ಯೋಜನೆಯಡಿ ವಿವಿಧ ಪರಿಷ್ಕೃತ ಘಟಕಗಳಾದ (1.4)ಹೊಸ ಮೀನುಕೃಷಿ ಕೊಳಗಳ ನಿರ್ಮಾಣ ಮತ್ತು (1.5) ಹೂಡಿಕೆ ವೆಚ್ಚಕ್ಕೆ ಸಹಾಯ(ಸಾಮಾನ್ಯ, ಮಹಿಳೆ ಮತ್ತು ಪ.ಜಾತಿ ಫಲಾನುಭವಿಗಳಿಗೆ ಮಾತ್ರ), (4.1)ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ(ಸಾಗರ ಮತ್ತು ಶುದ್ಧ ನೀರು ಎರಡೂ) (1 ಸಾಮಾನ್ಯ ಮತ್ತು 1 ಮಹಿಳೆ), ಮತ್ತು (5.4) ಬ್ಯಾಕ್ಯಾರ್ಡ್ ಮಿನಿ ಆರ್ಎಎಸ್ ಘಟಕಗಳ ಸ್ಥಾಪನೆ(1 ಮಹಿಳೆ) ಈ ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್, 08 ಕೊನೆಯ ದಿನವಾಗಿದೆ.

ಈ ಉಪ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಫಲಾನುಭವಿಗಳಿಗೆ ಶೇ.40 ರಷ್ಟು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಮತ್ತು ಶೇ.60 ರಷ್ಟು ಪ.ಜಾತಿ ಮತ್ತು ಮಹಿಳಾ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು.

ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಸಿ.ಎಸ್.ಸಚಿನ್ ಅವರು ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...