alex Certify ಸಚಿವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ರಕ್ಷಣೆಗೆ ನಿಂತಿದ್ದಾರೆ; ಇವರು ರಾಜ್ಯಪಾಲರಿಗಿಂತ ದೊಡ್ಡವರಾ? ಆರ್. ಅಶೋಕ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ರಕ್ಷಣೆಗೆ ನಿಂತಿದ್ದಾರೆ; ಇವರು ರಾಜ್ಯಪಾಲರಿಗಿಂತ ದೊಡ್ಡವರಾ? ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಇಡೀ ಕ್ಯಾಬಿನೇಟ್ ಮಂತ್ರಿ ಮಂಡಲವೇ ನಿಂತಿದೆ. ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ನೋಟಿಸ್ ಕೊಟ್ಟಾಗ ಅದರ ಹಕ್ಕು ರಕ್ಷಣೆ ಮಾಡಬೇಕು. ಅದನ್ನು ರಾಜ್ಯಪಾಲರು ಮಾಡಿದ್ದಾರೆ. ರಾಜ್ಯಪಾಲರು ನೀಡಿದ ನೋಟಿಸ್ ಗೆ ಪದ ಬಳಕೆ ಸರಿಯಿಲ್ಲ ಎಂದು ಸಚಿವರು ಹೇಳುತ್ತಿದ್ದಾರೆ. ರಾಜ್ಯಪಾಲರಿಗಿಂತ ಇವರು ದೊಡ್ಡವರಾ? ಎಂದು ಪ್ರಶ್ನಿಸಿದ್ದಾರೆ.

ನೋಟಿಸ್ ನೀಡುವಾಗ ತಜ್ಞರ ಅಭಿಪ್ರಾಯ ಪಡೆದೇ ಕೊಟ್ಟಿರುತ್ತಾರೆ. ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡಿ. ಇದಕ್ಕೆ ಕ್ಯಾಬಿನೆಟ್ ಮೀಟಿಂಗ್ ಕರೆದು ಚರ್ಚಿಸಿ, ರಾಜ್ಯಪಾಲರ ಮೇಲೆ ಒತ್ತಡ ಹೇರುವ ಕೆಲಸ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...