BIG NEWS: ಸಿದ್ದರಾಮಯ್ಯಗೆ ಕರ್ಮ ರಿಟರ್ನ್ಸ್ ಆಗಿದೆ: ಮಾಜಿ ಸಚಿವ ಜನಾರ್ಧನ ರೆಡ್ಡಿ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈಸೂರು ಚಲೋ ಜಂಟಿ ಪಾದಯಾತ್ರೆ ಆರಂಭಿಸಿದ್ದು, ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕರು ಮುಗಿಬಿದ್ದು ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಮಾಜಿ ಸಚಿವ, ಶಾಸಕ ಜನಾರ್ಧನ ರೆಡ್ಡಿ ಕೂಡ ಸಾಥ್ ನೀಡಿದ್ದು, ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕರ್ಮ ರಿಟರ್ನ್ ಆಗಿದೆ ಎಂದು ಟಾಂಗ್ ನೀಡಿದ್ದಾರೆ.

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಸಿದ್ದರಾಮಯ್ಯ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದ್ದರು. ಇಂದು ಸಿಎಂ ಸಿದ್ದರಾಮಯ್ಯ ಕುಟುಂಬವೇ ಹಗರಣದಲ್ಲಿ ಸಿಲುಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಪಾದಯಾತ್ರೆ ನಡೆಸುತ್ತಿದ್ದೇವೆ. ಕರ್ಮ ರಿಟರ್ನ್ ಆಗಿದೆ. ದೇವರು ಎಲ್ಲವನ್ನೂ ನೋಡುತ್ತಿರುತ್ತಾನೆ ಎಂದು ಹೇಳಿದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read