alex Certify ‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನಮ್ಮ ಮೆಟ್ರೋ’ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್.!

ಬೆಂಗಳೂರು : ನಮ್ಮ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ.

ಸಾಲದ ಸುಳಿವಿಗೆ ಸಿಲುಕಿ ಬೇಸತ್ತ ನವೀನ್ ಕುಮಾರ್ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನವೀನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದು, ಮೆಟ್ರೋ ರೈಲು ಬರುವ ಸಮಯದಲ್ಲಿ ಅವರು ಹಳಿ ಮೇಲೆ ಹಾರಿದ್ದಾರೆ ಎನ್ನಲಾಗಿದೆ.

ನವೀನ್ ಕುಮಾರ್ ಬೆಂಗಳೂರಿನಲ್ಲಿ ಹಾರ್ಡ್ ವೇರ್ ಬ್ಯುಸಿನೆಸ್ ಮಾಡಿಕೊಂಡಿದ್ದರು. ಬ್ಯುಸಿನೆಸ್ ನಲ್ಲಿ ಲಾಸ್ ಆದ ಹಿನ್ನೆಲೆ ಬಹಳ ಮನನೊಂದಿದ್ದರು. ಅಲ್ಲದೇ ಹಲವು ಕಡೆ ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದರು. ಮನೆಯವರು ಹಾಗೂ ಸಂಬಂಧಿಕರಿಗೆ ಕರೆ ಮಾಡಿ ಹಣ ಕೇಳುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ನವೀನ್ ಕುಮಾರ್ ಮೆಟ್ರೋ ಟ್ರ್ಯಾಕ್ ಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...