alex Certify ‘ತಲೆಬುಡ ಇಲ್ಲದ ಪ್ರಶ್ನೆಗಳನ್ನು ಕೇಳಿ ನಿಮ್ಮ ಗೌರವ ನೀವೇ ಕಳೆದುಕೊಳ್ಳಬೇಡಿ’ ; ಆರ್.ಅಶೋಕ್ ಗೆ ‘CM ಸಿದ್ದರಾಮಯ್ಯ’ ತಿರುಗೇಟು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ತಲೆಬುಡ ಇಲ್ಲದ ಪ್ರಶ್ನೆಗಳನ್ನು ಕೇಳಿ ನಿಮ್ಮ ಗೌರವ ನೀವೇ ಕಳೆದುಕೊಳ್ಳಬೇಡಿ’ ; ಆರ್.ಅಶೋಕ್ ಗೆ ‘CM ಸಿದ್ದರಾಮಯ್ಯ’ ತಿರುಗೇಟು

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ಅಶೋಕ್ ಅವರೇ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ ಹೋಗಿ ಕೇಳಿ, ಇಲ್ಲವೇ ಹೇಳಿ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ. ಇದಕ್ಕೆ ಸಂಬಂಧಿಸಿದಂತೆ ನಿಮಗೆ ಇಲ್ಲವೇ ನಿಮ್ಮ ಬಿಜೆಪಿ ಪಕ್ಷಕ್ಕೆ ಏನಾದರೂ ಹೇಳುವುದಿದ್ದರೆ ಇಲ್ಲವೇ ಕೇಳುವುದಿದ್ದರೆ ಎಸ್.ಐ.ಟಿ ಮುಂದೆ ಹೋಗಿ ಕೇಳಿ, ಇಲ್ಲವೇ ಹೇಳಿ. ಇದನ್ನು ಬಿಟ್ಟು ಹಾದಿಬೀದಿಯಲ್ಲಿ ಮಾತನಾಡುವವರಂತೆ, ತಾವೇ ಕತೆ ಕಟ್ಟಿಕೊಂಡು ತಲೆಬುಡ ಇಲ್ಲದ ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ.

ನಮಗೆ ಪ್ರಶ್ನೆ ಕೇಳುವ ಮೊದಲು ನಿಮ್ಮದೇ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿರಂತರವಾಗಿ ಪಕ್ಷದ ಅಧ್ಯಕ್ಷರಾದ ಬಿ.ವೈ ವಿಜಯೇಂದ್ರ ವಿರುದ್ಧ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧೈರ್ಯ ತೋರಿಸಿ. ಭ್ರಷ್ಟಾಚಾರ, ವಿದ್ರೋಹ ಮತ್ತು ಸ್ವಜನಪಕ್ಷಪಾತವೂ ಸೇರಿದಂತೆ ಯತ್ನಾಳ್ ಅವರು ಮಾಡುತ್ತಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿವೆ. ಇಂತಹ ಆರೋಪಗಳನ್ನು ಮಾಡಿದ ನಂತರವೂ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮಕೈಗೊಳ್ಳದಿರುವುದನ್ನು ನೋಡಿದರೆ ಅವರ ಆರೋಪಗಳಲ್ಲಿ ಸತ್ಯಾಂಶ ಇರುವುದನ್ನು ಪಕ್ಷದ ಹೈಕಮಾಂಡ್ ಕೂಡಾ ಒಪ್ಪಿಕೊಂಡಂತೆ ಕಾಣುತ್ತಿದೆ ಎಂದು ಅಶೋಕ್ ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...