alex Certify BREAKING: ಮೇಲಾಧಿಕಾರಿಗಳ ಕಿರುಕುಳದಿಂದ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಬ್ಯಾಂಕ್ ಉದ್ಯೋಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೇಲಾಧಿಕಾರಿಗಳ ಕಿರುಕುಳದಿಂದ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಬ್ಯಾಂಕ್ ಉದ್ಯೋಗಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಸದುರ್ಗದ ಲಾಡ್ಜ್ ನಲ್ಲಿ ಐಡಿಎಫ್‌ಸಿ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಂ. ಸಂತೋಷ್(40) ಆತ್ಮಹತ್ಯೆ ಮಾಡಿಕೊಂಡವರು. ಬೆಂಗಳೂರಿನಲ್ಲಿ IDFC ಬ್ಯಾಂಕ್ ಉದ್ಯೋಗಿಯಾಗಿದ್ದ ಸಂತೋಷ್ ಹೊಸದುರ್ಗದ ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಮೇಲಾಧಿಕಾರಿಗಳ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮಧ್ಯಪ್ರದೇಶಕ್ಕೆ ಸಂತೋಷ್ ವರ್ಗಾವಣೆ ಮಾಡಲಾಗಿತ್ತು. ಅನಾರೋಗ್ಯ ಕಾರಣ ಅವರು ಕರ್ನಾಟಕದಲ್ಲಿ ಇರಲು ಬಯಸಿದ್ದರು. IDFC ಬ್ಯಾಂಕ್ ಮುಖ್ಯಸ್ಥ ಸಂತೋಷ್ ಅವರನ್ನು ಎರಡು ದಿನಗಳ ಕಾಲ ಹೊಸದುರ್ಗ ಶಾಖೆಗೆ ಕಳುಹಿಸಿದ್ದರು. ಈ ವೇಳೆ ಹೊಸದುರ್ಗ ಲಾಡ್ಜ್ ನಲ್ಲಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೇಲಾಧಿಕಾರಿಗಳಿಂದ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದೇನೆ. ಲಂಚ ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ ಎಂದು ಅಧಿಕಾರಿಗಳ ವಿರುದ್ಧ ಆರೋಪಿಸಿದ್ದಾರೆ. ಐಡಿಎಫ್‍ಸಿ ಬ್ಯಾಂಕ್ ನನ್ನ ಸಾವಿಗೆ ಪರಿಹಾರ ನೀಡಬೇಕು ಎಂದು ಉಲ್ಲೇಖಿಸಿದ್ದು, ಹೊಸದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...