alex Certify ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು: ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯನ್ನು ಬೆಂಗಳೂರಿನ ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೈಯದ್ ಸರ್ಫರಾಜ್ ಅಹ್ಮದ್ ಬಂಧಿತ ಆರೋಪಿ. ಈತ ಪೊಲೀಸ್ ಠಾಣೆಗಳಿಗೆ ನುಗ್ಗಿ ಪೊಲೀಸರಿಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆಯೊಡ್ಡುತ್ತಿದ್ದ. ಆರೋಪಿಗಳ ಪರ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡುತ್ತೇವೆ. ಹಾಕಿರುವ ಕೇಸ್ ವಾಪಾಸ್ ಪಡೆಯಿರಿ ಎಂದು ಆವಾಜ್ ಹಾಕುತ್ತಿದ್ದ.

ಇದೇ ರೀತಿ ಶಿವಾಜಿನಗರ ಠಾಣೆಗೂ ನುಗ್ಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾಗ ಪೊಲೀಸರ ಕೈಗೆ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಪೊಲೀಸ್ ಠಾಣೆಗಳಿಗೆ ತೆರಳಿ ಅಧಿಕಾರಿಗಳ ಜೊತೆ ನಯವಾಗಿ ಮಾತನಾಡುತ್ತ, ಆರೋಪಿಗಳ ಪರಿಚಯ ಮಾಡಿಕೊಂಡು, ಬಳಿಕ ಪೊಲೀಸರು ಕಾನೂನು ಬಾಹಿರವಾಗಿ ಆರೋಪಿಗಳನ್ನು ಅಭಿರಕ್ಷೆಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ಸುಳ್ಳು ದೂರು ನೀಡುತ್ತಿದ್ದ. ದೂರು ಹಿಂಪಡೆಯಲು ಹಣಕ್ಕೆ ಬೇಡಿಕೆ ಇಡುತ್ತಿದ್ದ. ಹೀಗೆ ಹಲವು ಪೊಲೀಸ್ ಠಾಣೆಗಳಿಗೆ ಬೆದರಿಕೆ ಹಾಕಿ ಪೊಲೀಸರಿಂದ ಹಣ ವಸೂಲಿ ಮಾಡಿದ್ದ. ಸದ್ಯ ಆರೋಪಿಯನ್ನು ಶಿವಾಜಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...