alex Certify ರಾಜ್ಯದಲ್ಲಿ ಮತ್ತೊಂದು ‘ಕುಕ್ಕರ್ ಬ್ಲಾಸ್ಟ್’ ಅವಘಡ : 9 ಮಂದಿಗೆ ಗಂಭೀರ ಗಾಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ಮತ್ತೊಂದು ‘ಕುಕ್ಕರ್ ಬ್ಲಾಸ್ಟ್’ ಅವಘಡ : 9 ಮಂದಿಗೆ ಗಂಭೀರ ಗಾಯ..!

ಬೆಳಗಾವಿ : ಬೆಳಗಾವಿಯ ಹೋಟೆಲ್ ನಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಇರುವ ಹೋಟೆಲ್ ಒಂದರಲ್ಲಿ ಕುಕ್ಕರ್ ಸ್ಫೋಟಗೊಂಡು 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾದಗಿರಿಯ ಐವರು ಹಾಗೂ ಬೆಂಗಳೂರಿನ ನಾಲ್ವರು ಸೇರಿ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳು ಸವದತ್ತಿಗೆ ದೇವರ ದರ್ಶನಕ್ಕೆಂದು ಬಂದು ಪಟ್ಟಣದ ಹೋಟೆಲ್ ರೂಂ ನಲ್ಲಿ ತಂಗಿದ್ದರು. ಈ ವೇಳೆ ಹೋಳಿಗೆ ಮಾಡಲೆಂದು ಹೋಟೆಲ್ ರೂಮಿನಲ್ಲಿ ಕುಕ್ಕರ್ ನಲ್ಲಿ ಬೇಳೆ ಬೇಯಿಸಲು ಇಟ್ಟಿದ್ದರು. ಆದರೆ ಬೇಳೆಗೆ ನೀರು ಹಾಕಲು ಮರೆತಿದ್ದಾರೆ. ಪರಿಣಾಮ ಕೆಲವು ಕ್ಷಣದಲ್ಲೇ ಕುಕ್ಕರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ತೀವ್ರತೆಗೆ ಹೋಟೆಲ್ ತುಂಬ ಬೆಂಕಿ ಆವರಿಸಿದೆ. ಪರಿಣಾಮ 9 ಜನರು ಗಾಯಗೊಂಡಿದ್ದಾರೆ. ಈ ಬಗ್ಗೆ ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...