alex Certify SHOCKING : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ; ಸಂಬಳ ಕೇಳಿದ್ದಕ್ಕೆ ನಗ್ನಗೊಳಿಸಿ ಹಲ್ಲೆ ಮಾಡಿದ ಕಿರಾತಕ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ; ಸಂಬಳ ಕೇಳಿದ್ದಕ್ಕೆ ನಗ್ನಗೊಳಿಸಿ ಹಲ್ಲೆ ಮಾಡಿದ ಕಿರಾತಕ..!

ಬೆಂಗಳೂರು : ಬೆಂಗಳೂರಿನಲ್ಲಿ ಅಮಾನವೀಯ ಘಟನೆ ನಡೆದಿದ್ದು, ಸಂಬಳ ಕೇಳಿದಕ್ಕೆ ನಗ್ನಗೊಳಿಸಿ ಹಲ್ಲೆ ನಡೆಸಿದ ಘಟನೆ ಉತ್ತರಹಳ್ಳಿಯಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಷರೀಫ್ ಮೇಲೆ  ಹಾಸಿಗೆ ವ್ಯಾಪಾರಿ ಷೇಕ್ಷಾವಾಲಾ ಎಂಬಾತ ಹಲ್ಲೆ ನಡೆಸಿದ್ದಾನೆ. ಷೇಕ್ಷಾವಾಲಾ ಬಳಿ ಕೆಲಸ ಮಾಡಿಕೊಂಡಿದ್ದ ಷರೀಪ್ ಸಂಬಳ ಕೇಳಿದ್ದಕ್ಕೆ ಆತನನ್ನು ನಗ್ನಗೊಳಿಸಿ ಹಲ್ಲೆ ನಡೆಸಿದ್ದಾನೆ. ಸಾಲದ್ದಕ್ಕೆ ಇದನ್ನು ವಿಡಿಯೋ ಕೂಡ ಮಾಡಿದ್ದಾನೆ.

ಜುಲೈ 24ರಂದು ಮಾಲೀಕ ಶೆಕ್ಷಾವಲ ಶರೀಫನಿಗೆ ಕರೆ ಮಾಡಿ ಬಾಕಿ ಸಂಬಳ ಕೊಡ್ತೀನಿ ಎಂದು ಹೇಳಿ ತನ್ನ ಉತ್ತರಹಳ್ಳಿಯ ಅಂಗಡಿಗೆ ಬರುವಂತೆ ತಿಳಿಸಿದ್ದ. ಹಣ ಸಿಗುತ್ತೆ ಎಂಬ ಆಸೆಗೆ ಶರೀಫ ಬಂದಿದ್ದ. ಆದರೇ ಹಣ ಕೊಡೊದಾಗಿ ಕರೆಸಿ ಅಂಗಡಿಯ ಶೆಟರ್ ಎಳೆದು ಬೆತ್ತದಿಂದ ಮನ ಬಂದಂತೆ ಶರೀಫ್ ಮೇಲೆ ಹಲ್ಲೆ ನಡೆಸಿ ನಗ್ನಗೊಳಿಸಿ ವಿಡಿಯೋ ರೆಕಾರ್ಡ್ ಮಾಡಿ ಶೆಕ್ಷಾವಲ ಅಟ್ಟಹಾಸ ಮೆರೆದಿದ್ದಾನೆ.

ಶರೀಫ್ ಶೇಕ್ಷಾವಾಲ ಬಳಿ ಕೆಲಸ ಮಾಡುತ್ತಿದ್ದರು. ಹಲವು ಬಾರಿ ಸಂಬಳ ಕೇಳಿದರೂ ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಶರೀಫ್ ಕೆಲಸ ಬಿಟ್ಟು ಹೋಗಿದ್ದರು. ನಂತರ ಷರೀಪ್ ಶೇಕ್ಷಾವಾಲಗೆ ಕರೆ ಮಾಡಿ ತನ್ನ ಸಂಬಳ ಕೊಡುವಂತೆ ಕೇಳಿದ್ದಾನೆ. ನಂತರ ಶರೀಫ್ ನನ್ನು ಕರೆಸಿಕೊಂಡು ಅಂಗಡಿಯ ಒಳಗೆ ಶಟರ್ ಬಂದ್ ಮಾಡಿ ಕೂಡಿಟ್ಟು ಬೆತ್ತದಿಂದ ಹಲ್ಲೆ ನಡೆಸಿದ್ದಾನೆ. ಅಲ್ಲದೇ ನಗ್ನಗೊಳಿಸಿ ಥಳಿಸಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ. ಸದ್ಯ ಶರೀಫ್​ನಿಂದ ದೂರು ದಾಖಲಿಸಿಕೊಂಡಿರುವ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...