alex Certify ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹೋಮ-ಹವನ: ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಖ್ಯಾತ ನಟ-ನಟಿಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹೋಮ-ಹವನ: ವಿಶೇಷ ಪೂಜೆಯಲ್ಲಿ ಪಾಲ್ಗೊಂಡ ಖ್ಯಾತ ನಟ-ನಟಿಯರು

ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ಕಲಾವಿದರ ಸಂಘದಿಂದ ಹಿರಿಯ ನಟ ದೊಡ್ಡಣ್ಣ ದಂಪತಿ ನೇತೃತ್ವದಲ್ಲಿ ಹಾಗೂ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಸಮ್ಮುಖದಲ್ಲಿ ವಿಶೇಷ ಹೋಮ-ಹವನ ನಡೆಸಲಾಗಿದೆ.

ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಗಣಪತಿ ಹೋಮ, ಸರ್ಪಶಾಂತಿ, ಮೃತ್ಯುಂಜಯ ಹೋಮ ಸೇರಿದಂತೆ ಹಲವು ರೀತಿಯ ಹೋಮ-ಹವನ, ವಿಶೇಷ ಪೂಜೆಗಳನ್ನು 8 ಜನರ ಪುರೋಹಿತರ ನೇತೃತ್ವದಲ್ಲಿ ನೆರವೇರಿಸಲಾಗಿದೆ.

ಕೋವಿಡ್ ಬಳಿಕ ಕನ್ನಡ ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟ, ನಟರ ಅಗಲಿಕೆ, ಚಿತ್ರರಂಗಕ್ಕೆ ಎದುರಾಗಿರುವ ಸಂಕಷ್ಟಗಳ ನಿವಾರಣೆ ಹಾಗೂ ಕನ್ನಡ ಚಿತ್ರರಂಗದ ಅಭಿವೃದ್ಧಿಗಾಗಿ ಈ ಪೂಜೆ ನೆರವೇರಿಸಲಾಗಿದೆ. ವಿಶೇಷ ಪೂಜೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ-ನಟಿಯರು, ಕಲಾವಿದರು ಪಾಲ್ಗೊಂಡಿದ್ದಾರೆ.

ಕನ್ನಡ ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞರು, ಕಲಾವಿದರು, ಹಿರಿಯ ನಟಿ ಗಿರಿಜಾ ಲೋಕೇಶ್, ಪದ್ಮಾವಾಸಂತಿ, ಪದ್ಮಜಾ ರಾವ್, ಶಾಂತಲಾ, ವಾಣಿಶ್ರೀ, ನಟರಾದ ಪ್ರೇಮ್, ಅಭಿಷೇಕ್ ಅಂಬರೀಶ್ ಸೇರಿದಂತೆ ಬಹುತೇಕ ಕಲಾವಿದರು ಪಾಲ್ಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...