alex Certify BREAKING: ಸಿಎಂ ಬದಲಾದರೂ ಅಚ್ಚರಿ ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಿಎಂ ಬದಲಾದರೂ ಅಚ್ಚರಿ ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್ ಸ್ಪೋಟಕ ಹೇಳಿಕೆ

ಕೋಲಾರ: ಮುಖ್ಯಮಂತ್ರಿ ಬದಲಾದರೂ ಅಚ್ಚರಿಯಿಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೊಂದಲಮಯ ವಾತಾವರಣದಲ್ಲಿದೆ. ಕಾಂಗ್ರೆಸ್ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಗುಂಪುಗಾರಿಕೆ ಇದೆ. ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾದರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.

ಗ್ಯಾರಂಟಿಗಳನ್ನು ತೊಲಗಿಸಿ ಅಭಿವೃದ್ಧಿ ಕಡೆ ಗಮನ ಕೊಡಿ. ಅನುದಾನವಿಲ್ಲದೆ ಬರಿಗೈನಲ್ಲಿ ಸಂಸಾರ ಮಾಡುವಂತಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕೆಟ್ಟ ಸರ್ಕಾರ ತೊಲಗಿ ಒಳ್ಳೆಯ ಸರ್ಕಾರ ಬರಬೇಕು. ಐದು ಗ್ಯಾರಂಟಿ ಘೋಷಿಸಿ ಜನರ ಕಿವಿಗೆ ದಾಸವಾಳ ಹೂ ಇಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಟೀಕಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...