ಎದೆಗುಂದಬೇಡಿ, ರಾಜೀನಾಮೆ ಕೊಡಬೇಡಿ: ಸಿದ್ಧರಾಮಯ್ಯ ಬೆನ್ನಿಗೆ ನಿಂತು ನೈತಿಕ ಸ್ಥೈರ್ಯ ತುಂಬಿದ ಸಂಪುಟ ಸಹೋದ್ಯೋಗಿಗಳು

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನಲೆಯಲ್ಲಿ ಇಂದು ಮಹತ್ವದ ಸಂಪುಟ ಸಭೆ ನಡೆಸಲಾಗಿದೆ.

ಸಂಪುಟ ಸಹೋದ್ಯೋಗಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿದ್ದಾರೆ. ನೀವು ಎದೆಗುಂದಬೇಡಿ. ನಿಮ್ಮ ಜೊತೆಗೆ ನಾವಿದ್ದೇವೆ ಎಂದು ಮುಖ್ಯಮಂತ್ರಿಗಳಿಗೆ ಸಂಪುಟ ಸಹೋದ್ಯೋಗಿಗಳು ನೈತಿಕ ಸ್ಥೈರ್ಯ ತುಂಬಿದ್ದಾರೆ.

ಸಂಪುಟ ಸಭೆಯಲ್ಲಿ ಇಂದು ಸಚಿವರು ಮುಖ್ಯಮಂತ್ರಿಗಳಿಗೆ ಆತ್ಮಸ್ಥೈರ್ಯ ತುಂಬಿದ್ದು, ನೀವು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬೇಡಿ. ರಾಜೀನಾಮೆ ಕೊಡುವಂತಹ ಕೆಲಸವನ್ನೇನೂ ಮಾಡಿಲ್ಲ. ನಿಮ್ಮ ಜೊತೆಗೆ ನಾವಿರುತ್ತೇವೆ ಎಂದು ತಿಳಿಸಿದ್ದಾರೆ.

ನೈತಿಕ ಹೊಣೆ ಹೊತ್ತು ನೀವು ರಾಜೀನಾಮೆ ಕೊಡುವುದು ಬೇಡ, ಅಂತಹ ಯಾವ ಕಾನೂನು ಬಾಹಿರ ಕೆಲಸವನ್ನು ನೀವು ಮಾಡಿಲ್ಲ. ಈ ಪ್ರಕರಣದಲ್ಲಿ ಪ್ರತ್ಯಕ್ಷ, ಪರೋಕ್ಷವಾಗಿ ನಿಮ್ಮ ಪಾತ್ರ ಇಲ್ಲ ಎಂದಿರುವ ಸಚಿವರು ಸಿಎಂ ಜೊತೆಗೆ ನಿಲ್ಲುವುದಾಗಿ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read