alex Certify ಗೋಕರ್ಣ ದೇವಾಲಯ ಮೇಲ್ವಿಚಾರಣಾ ಸಮಿತಿ ಪುನಾರಚನೆ: ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗೋಕರ್ಣ ದೇವಾಲಯ ಮೇಲ್ವಿಚಾರಣಾ ಸಮಿತಿ ಪುನಾರಚನೆ: ಸರ್ಕಾರ ಆದೇಶ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ವ್ಯವಹಾರ ನಿರ್ವಹಣೆಗೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ.ಎನ್. ಕೃಷ್ಣ ಅವರ ಅಧ್ಯಕ್ಷತೆಯಲ್ಲಿ ಎಂಟು ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ಸರ್ಕಾರ ಪುನರ್ ರಚಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪ್ರಕರಣ ಇತ್ಯರ್ಥವಾಗುವವರೆಗೆ ದೇವಾಲಯದ ವ್ಯವಹಾರ ನೋಡಿಕೊಳ್ಳಲು ಸಮಿತಿಯನ್ನು ರಚನೆ ಮಾಡಲಾಗಿದೆ. ಹೈಕೋರ್ಟ್ ಆದೇಶದಂತೆ ಸಮಿತಿಯಿಂದ ಕೈ ಬಿಡಲಾಗಿದ್ದ ಗೋಕರ್ಣದ ವಿದ್ವಾನ್ ಗಣಪತಿ ಶಿವರಾಮ ಹಿರೇಭಟ್, ವಿದ್ವಾನ್ ಸುಬ್ರಹ್ಮಣ್ಯ ಚಂದ್ರಶೇಖರ್ ಅಡಿ, ಪರಮೇಶ್ವರ್ ಸುಬ್ರಹ್ಮಣ್ಯ ಪ್ರಸಾದ ರಮಣಿ, ಮಹೇಶ್ ಗಣೇಶ್ ಹಿರೇಗಂಗೆ ಅವರು ಸುಪ್ರೀಂಕೋರ್ಟ್ ಆದೇಶದಂತೆ ಪುನಃ ನಾಮ ನಿರ್ದೇಶಕರಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲಾ ನ್ಯಾಯಾಧೀಶರನ್ನು ಸಮಿತಿಯ ಉಪಾಧ್ಯಕ್ಷರಾಗಿ ನಿಯೋಜಿಸಲಾಗಿದೆ. ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರು ಸಮಿತಿ ಸದಸ್ಯರಾಗಿದ್ದಾರೆ. ಕುಮಟಾ ಉಪ ವಿಭಾಗಾಧಿಕಾರಿ ಕಾರ್ಯದರ್ಶಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Zimowy dżem z wiciokrzewu Jak zrobić idealny domowy Wciągający Eksperyment Kulinarne: Konfitura Zaczarowane smaki Niesamowity dżem z rabarbaru z dodatkiem Odkryj sekrety przygotowania Tajemnice idealnego przygotowania klasycznego rabarbarowego dżemu: 7 Zamrożona Eksplozja Smaku: Odkrywaj sekrety doskonałego sernika bez konieczności pieczenia