alex Certify ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪ್ರಬಲ ಸಾಕ್ಷ್ಯ ಲಭ್ಯ ಹಿನ್ನಲೆ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಫಿಕ್ಸ್: ಎ1 ಆರೋಪಿಯಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು: ಪ್ರಬಲ ಸಾಕ್ಷ್ಯ ಲಭ್ಯ ಹಿನ್ನಲೆ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟ ಫಿಕ್ಸ್: ಎ1 ಆರೋಪಿಯಾಗಿ ಚಾರ್ಜ್ ಶೀಟ್ ಸಲ್ಲಿಕೆಗೆ ಸಿದ್ಧತೆ

 ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಮತ್ತಷ್ಟು ಸಂಕಷ್ಟ ಫಿಕ್ಸ್ ಆಗಿದೆ.

ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಮಾಡಲು ಸಿದ್ಧತೆ ನಡೆಸಲಾಗಿದೆ. ದರ್ಶನ್ ಪ್ರಕರಣದಲ್ಲಿ ಎ2 ಆಗಿದ್ದು, ಅವರನ್ನು ಎ1 ಆರೋಪಿ ಮಾಡಿ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪವಿತ್ರಾಗೌಡ ಮೊದಲನೇ ಆರೋಪಿಯಾಗಿ ಮಾಡಲಾಗಿದ್ದು, ದರ್ಶನ್ ಎ2 ಆರೋಪಿಯಾಗಿದ್ದಾರೆ. ಅವರನ್ನು ಮೊದಲನೇ ಆರೋಪಿಯಾಗಿ ಮಾಡಿ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎನ್ನಲಾಗಿದೆ.

ದರ್ಶನ್ ವಿರುದ್ಧ ಮತ್ತಷ್ಟು ಪ್ರಬಲ ಸಾಕ್ಷ್ಯ ಲಭ್ಯವಾಗಿವೆ. ಆರೋಪಿಗಳ ಮೊಬೈಲ್ ನಲ್ಲಿದ್ದ ನಾಲ್ಕು ಫೋಟೋಗಳನ್ನು ರಿಟ್ರೀವ್ ಮಾಡಲಾಗಿದೆ. ರೇಣುಕಾ ಸ್ವಾಮಿ ರಕ್ತಸಿಕ್ತವಾಗಿರುವ ನಾಲ್ಕು ಫೋಟೋಗಳು ಲಭ್ಯವಾಗಿವೆ. ರೇಣುಕಾ ಸ್ವಾಮಿ ಕೈ ಮುಗಿಯುತ್ತಿರುವ ಫೋಟೋ ಹಾಗೂ ರಕ್ತದ ಮಡುವಿನಲ್ಲಿ ಬಿದ್ದಿರುವ ಫೋಟೋಗಳು ಲಭ್ಯವಾಗಿವೆ. ಆರೋಪಿ ಪ್ರದೋಶ್ ಮೊಬೈಲ್ ನಲ್ಲಿ ಹಾಗೂ ಮತ್ತೊಬ್ಬ ಆರೋಪಿ ಮೊಬೈಲ್ ನಲ್ಲಿದ್ದ ಫೋಟೋಗಳನ್ನು ಹೈದರಾಬಾದ್ ಎಫ್ಎಸ್ಎಲ್ ನಲ್ಲಿ ರಿಟ್ರೀವ್ ಮಾಡಲಾಗಿದೆ.

ಈ ಫೋಟೋಗಳು ರೇಣುಕಾಸ್ವಾಮಿ ಕೊಲೆಗೆ ಮಹತ್ವದ ಸಾಕ್ಷಿಯಾಗಿವೆ. ದರ್ಶನ್ ಆಣತಿಯಂತೆ ರೇಣುಕಾಸ್ವಾಮಿ ಅಪಹರಿಸಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಬಳಿಕ ಶವ ವಿಲೇವಾರಿಗೆ ದರ್ಶನ್ ಹಣ ಕೊಟ್ಟಿದ್ದಾರೆ. ಹೀಗಾಗಿ ನಟ ದರ್ಶನ್ ಅವರನ್ನು ಮೊದಲನೇ ಆರೋಪಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...