alex Certify ತೋಟಕ್ಕೆ ತೆರಳುವಾಗ ದಿಢೀರ್ ದಾಳಿ ನಡೆಸಿದ ಕಾಡಾನೆ: ಕಾರ್ಮಿಕ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೋಟಕ್ಕೆ ತೆರಳುವಾಗ ದಿಢೀರ್ ದಾಳಿ ನಡೆಸಿದ ಕಾಡಾನೆ: ಕಾರ್ಮಿಕ ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾಡಾನೆ ದಾಳಿಯಿಂದ ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ ನಗರ ಸಮೀಪದ ಆಲದೇವರ ಹೊಸೂರು ಗ್ರಾಮದಲ್ಲಿ ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.

ಹನುಮಂತಪ್ಪ(40) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಅವರು ಆಲದೇವರ ಹೊಸೂರು ಸಮೀಪದಲ್ಲಿ ಸಂಪತ್ ಕುಮಾರ್ ಎಂಬುವರ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅವರು ಕುಟುಂಬದವರೊಂದಿಗೆ ತೋಟದಲ್ಲಿಯೇ ವಾಸವಾಗಿದ್ದರು.

ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ತೋಟಕ್ಕೆ ತೆರಳುತ್ತಿದ್ದ ವೇಳೆ ಕಾಡಾನೆ ಡಿಢೀರ್ ದಾಳಿ ನಡೆಸಿದ್ದು, ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹನುಮಂತಪ್ಪ ಅವರಿಗೆ ಪತ್ನಿ, ನಾಲ್ವರು ಮಕ್ಕಳಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...