alex Certify BREAKING NEWS: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಹಿಡಿದು ಧರ್ಮದೇಟು ನೀಡಿದ ಸ್ಥಳೀಯರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಹಿಡಿದು ಧರ್ಮದೇಟು ನೀಡಿದ ಸ್ಥಳೀಯರು

ಬೆಳಗಾವಿ: ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಕಾಮುಕನನ್ನು ಹಿಡಿದು ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ.

ಸುನೀಲ್ ದೀಪಾಳೆ ಎಂಬಾತ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಡ್ರಾಪ್ ಕೊಡುವ ನೆಪದಲ್ಲಿ ಬಾಲಕಿಯನ್ನು ಬೈಕ್ ನಲ್ಲಿ ಕರೆದೊಯ್ದ ಸುನೀಲ್ ದೀಪಾಳೆ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಬಾಲಕಿ ಕಿರುಚಾಟ ಕೇಳಿ ಸ್ಥಳೀಯರು ಸ್ಥಳಕ್ಕೆ ಓಡಿಬಂದಿದ್ದಾರೆ. ಆರೋಪಿ ಸುನೀಲ್ ದೀಪಾಳೆಯನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸಾರ್ವಜನಿಕರಿಂದ ಹಲ್ಲೆಗೊಳಗಾದ ಸುನೀಲ್ ನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...