alex Certify ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜನೆ : ವಿಜೇತರಿಗೆ ಸಿಗಲಿದೆ ‘31,000’ ನಗದು ಬಹುಮಾನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ‘ಬಾಪೂಜಿ ಪ್ರಬಂಧ ಸ್ಪರ್ಧೆ’ ಆಯೋಜನೆ : ವಿಜೇತರಿಗೆ ಸಿಗಲಿದೆ ‘31,000’ ನಗದು ಬಹುಮಾನ..!

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿಯ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಹಾಗೂ ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಇತ್ಯಾದಿ ವಿಚಾರಗಳ ಬಗ್ಗೆ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ / ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.

ವಿವಿಧ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ/ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ ಒಟ್ಟು 3 ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲು ಉದ್ದೇಶಿಸಲಾಗಿದೆ. ವಿಜೇತರಿಗೆ ರಾಜ್ಯಮಟ್ಟದಲ್ಲಿ ಪ್ರಥಮ 31 ಸಾವಿರ ರೂ., ದ್ವಿತೀಯ 21 ಸಾವಿರ ರೂ. ಮತ್ತು ತೃತೀಯ 11 ಸಾವಿರ ರೂ. ಹಾಗೂ ಜಿಲ್ಲಾಮಟ್ಟದಲ್ಲಿ ಪ್ರಥಮ 3 ಸಾವಿರ ರೂ. ದ್ವಿತೀಯ 2 ಸಾವಿರ ರೂ. ಮತ್ತು ತೃತೀಯ 1 ಸಾವಿರ ರೂ. ಬಹುಮಾನ ನೀಡಲಾಗುವುದು.

ಪ್ರೌಢ ಶಾಲಾ ವಿಭಾಗ : 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ಗಾಂಧೀಜಿಯವರ ವಿಚಾರದಲ್ಲಿ ಸತ್ಯಾಗ್ರಹ, 3) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ, 4) ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 900 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಪೂರ್ವ ಶಿಕ್ಷಣ ವಿಭಾಗ : 1) ಮಹಾತ್ಮ ಗಾಂಧೀಜಿ ಹಾಗೂ ಪ್ರಜಾಪ್ರಭುತ್ವ, 2) ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿನ ಗಾಂಧೀಜಿಯವರ ಪ್ರಯೋಗಗಳು, 3) ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ, 4) ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗ್ಗೆ
ಪದವಿ ಪೂರ್ವ ಶಿಕ್ಷಣ ವಿಭಾಗದ ವಿದ್ಯಾರ್ಥಿಗಳು ಈ ನಾಲ್ಕು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಸುಮಾರು 1500 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗ : 1) ಇಂದಿನ ಪ್ರಜಾಪ್ರಭುತ್ವದಲ್ಲಿ ಸತ್ಯಾಗ್ರಹದ ಮಹತ್ವ, 2) ದೇಶ ನಿರ್ಮಾಣದಲ್ಲಿ ಗಾಂಧೀಜಿಯವರ ಜಾತ್ಯಾತೀತ ನಿಲುವುಗಳು, 3) ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವಾತಂತ್ರ್ಯ ಮತ್ತು ಸಮಾನತೆಯ ಪರಿಕಲ್ಪನೆಗಳು, 4) ಗಾಂಧೀಜಿಯವರ ವಿಚಾರದಲ್ಲಿ ಸತ್ಯದ ಪರಿಕಲ್ಪನೆ, 5) ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು.

ಪದವಿ ಹಾಗೂ ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳು ಈ ಐದು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯ ಕುರಿತು ಸುಮಾರು 2000 ಪದಗಳಿಗೆ ಮೀರದಂತೆ ಪ್ರಬಂಧ ಬರೆಯಬೇಕು.
06-09-2024 ರೊಳಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತದ ಸಹಯೋಗದೊಂದಿಗೆ ಸ್ಪರ್ಧೆ ಏರ್ಪಡಿಸಿ 10-09-2024 ರೊಳಗಾಗಿ ಮೌಲ್ಯಮಾಪನ ಮಾಡಿ, ವಿಜೇತರ ವಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಲಿದೆ. ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.

ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು ಪ್ರಬಂಧಗಳಿಗೆ ಅಕ್ಟೋಬರ್ 2 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ನಿಬಂಧನೆಗಳು 
– ಪ್ರಬಂಧವು ಸಂಪೂರ್ಣವಾಗಿ ಸ್ವರಚಿತವಾಗಿರಬೇಕು.
– ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು.
– ಆಕರವಾಗಿ ಬಳಸಿದ ಆಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು.
– ಪ್ರಬಂಧ ಬರೆಯುವ ಸ್ಥಳದಲ್ಲಿ ಪರಾಮರ್ಶನ/ಆಧಾರ ಗ್ರಂಥಗಳು/ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ.
– ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು.
– ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.
– ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Začnite svoj deň s našimi životnými hackmi a užitočnými článkami o záhradkárstve a kulinárskych tipoch. Objavte nové spôsoby, ako využiť svoj čas a zlepšiť svoj život prostredníctvom našich nápadov a trikov. Zimné nakladané uhorky Talianske panini - Talianske sendviče Kvalita uhoriek: : Šetrná gazdinka: Baklažánový kastról Melanzana Parmigiana v trúbe Jem z vykôstkovaných Chutný avokádový šalát s osviežujúcou uhorkou a Mini hamburgerčeky Vytvor si kvetinový vodopád zo zrezanej Tajomný tvarohový koláč Rassolnik s ryžou a Šalát s Rebarborový Zmena stravy a zdravý mozog: prevencia Zeleninový Domáca šavarma s bravčovým mäsom 10 osviežujúcich Chladivý repový a Keď varím polievku, PP-šašlik s kuracím mäsom v lavash Tradičný recept na Turecký azúr Chutný sendvič na raňajky: Pečené rajčiaky Chcete zlepšiť svoj život? Potrebujete nové kulinárske tipy alebo užitočné rady pre záhradkárov? Navštívte náš web plný užitočných lifestylových tipov, kulinárskych receptov a článkov o záhradníctve. Nájdete u nás svoju dávku inšpirácie pre zdravý a pohodlný životný štýl. Staňte sa majstrom v domácej kuchyni a záhradníctve s našimi tipmi a trikmi. Pozrite sa na naše články ešte dnes a začnite žiť lepší a plnohodnotnejší život!