ಕಾರ್ಕಳ ಅತ್ಯಾಚಾರ ಪ್ರಕರಣ: ಮತ್ತೊಬ್ಬ ಆರೋಪಿ ಅರೆಸ್ಟ್

ಉಡುಪಿ: ಕಾರ್ಕಳದಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಅಭಯ್(23) ಬಂಧಿತ ಆರೋಪಿ. ಪ್ರಕರಣದ ಮೊದಲನೇ ಆರೋಪಿ ಅಲ್ತಾಫ್ ಗೆ ಮಾದಕ ವಸ್ತು ಪೂರೈಕೆ ಮಾಡಿದ ಹಿನ್ನೆಲೆಯಲ್ಲಿ ಅಭಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೃತ್ಯ ಎಸಗಿದ ಬಳಿಕ ಅಲ್ತಾಫ್ ತಪ್ಪಿಸಿಕೊಳ್ಳಲು ಅಭಯ್ ಸಹಕಾರ ನೀಡಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಅಭಯ್ ನನ್ನು ಬಂಧಿಸಿರುವ ಪೊಲೀಸರು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ವಿಚಾರಣೆಗಾಗಿ ಆತನನ್ನು ವಶಕ್ಕೆ ಪಡೆ ಪಡೆದು ತನಿಖೆ ಮುಂದುವರೆಸಲಿದ್ದಾರೆ.

ಎನ್.ಡಿ.ಪಿ.ಎಸ್. ಪ್ರಕರಣದಲ್ಲಿ ಅಭಯ್ ನನ್ನು ಬಂಧಿಸಲಾಗಿದೆ. ಮತ್ತಿಬ್ಬರು ಸಂಶಯಾಸ್ಪದ ವ್ಯಕ್ತಿಗಳನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಪ್ರಕರಣದಲ್ಲಿ ಈ ಮೊದಲು ಅಲ್ತಾಫ್ ಮತ್ತು ಶ್ರಾವೇದ್ ರಿಚರ್ಡ್ ಕ್ವಾಡ್ರಸ್ ಅವರನ್ನು ಪೊಲೀಸರು ಬಂಧಿಸಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read