alex Certify JOB ALERT : ಬೆಂಗಳೂರಿನಲ್ಲಿ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB ALERT : ಬೆಂಗಳೂರಿನಲ್ಲಿ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ : ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಬೆಂಗಳೂರು ನಗರ ಜಿಲ್ಲೆಯ, ಬಿಬಿಎಂಪಿ ವಲಯ ವಾರ್ಡ್ ಗಳಲ್ಲಿ/ಪುರಸಭೆ/ನಗರ ಸಭೆಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಮಾಸಿಕ ಗೌರವಧನ ಆಧಾರದಲ್ಲಿ ನೇಮಕಾತಿ ಮಾಡಲು ಆಸಕ್ತ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿದ್ದು,. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ/ಅನುರ್ತೀಣರಾಗಿರಬೇಕು. ನಗರ ಪುನರ್ವಸತಿ ಕಾರ್ಯಕರ್ತರ (URW) ಹುದ್ದೆಗೆ ಬಿಬಿಎಂಪಿ ವಾರ್ಡ್ ಗಳಲ್ಲಿ ಸ್ಥಳೀಯವಾಗಿ ವಾಸವಿರಬೇಕು. ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆಯನ್ನು ಹೊಂದಿರಬೇಕು (ಅಂಗವಿಕಲರ ಗುರುತಿನ ಚೀಟಿ ಪ್ರತಿಯನ್ನು ಲಗತ್ತಿಸಬೇಕು), ಭಾಗಶಃ ದೃಷ್ಠಿದೋಷವುಳ್ಳವರು, ಭಾಗಶಃ ಶ್ರವಣದೋಷವುಳ್ಳವರು, ದೈಹಿಕ ಅಂಗವಿಕಲರು ಮಾತ್ರ ಅರ್ಜಿ ಸಲ್ಲಿಸಬಹುದು.

ಆಸಕ್ತ ವಿಕಲಚೇತನ ಅಭ್ಯರ್ಥಿಗಳು ಅರ್ಜಿಗಳನ್ನು ಸೆಪ್ಪೆಂಬರ್ 18 ಸಂಜೆ 5.00 ಗಂಟೆಯೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಸುಧಾರಣಾ ಸಂಸ್ಥೆಗಳ ಸಂಕೀರ್ಣ ಹೊಸೂರು ರಸ್ತೆ, ಬೆಂಗಳೂರು ನಗರ ಜಿಲ್ಲೆ ಇಲ್ಲಿ ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29752324 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...