ಎಟಿಎಂಗೆ ನುಗ್ಗಿದ ವ್ಯಕ್ತಿ: ಸೈರನ್ ಒಡೆದು ದಾಂಧಲೆ

ಕಾರವಾರ: ಎಟಿಎಂ ಗೆ ನುಗ್ಗಿದ ವ್ಯಕ್ತಿಯೋರ್ವ ದಾಂಧಲೆ ನಡೆಸಿದ್ದು, ಸೈರನ್ ಒಡೆದು ಗಲಾಟೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದೆ.

ಇಂಡಿಯನ್ ಬ್ಯಾಂಕ್ ಎಟಿಎಂಗೆ ನುಗ್ಗಿದ ವ್ಯಕ್ತಿಯೊಬ್ಬ ಎಟಿಎಂ ಸೈರನ್ ಒಡೆದು ಹಾಕಿದ್ದಾನೆ. ಈ ವೇಳೆ ಬಾಗಿಲು ಏಕಾಏಕಿ ಲಾಕ್ ಆಗಿದೆ. ಸಮೀಪದಲ್ಲಿಯೇ ಇದ್ದ ಎಸ್ ಬಿಐ ಎಟಿಎಂ ಸೆಕ್ಯೂರಿಟಿ ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕಾಗಮಿಸಿದ ಪೊಲೀಸರು ಎಟಿಎಂ ಬಾಗಿಲು ತೆರೆದು ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಹಾಸನ ಮೂಲದ ವ್ಯಕ್ತಿಯಾಗಿದ್ದು, ಮಾನಸಿಕ ಅಸ್ವಸ್ಥ ಎಂದು ತಿಳಿದುಬಂದಿದೆ.

ಎಟಿಎಂ ಯಂತ್ರಕ್ಕೆ ಯಾವುದೇ ಹಾನಿಯಾಗಿಲ್ಲ, ಹಣ ಕಳ್ಳತನ ಕೂಡ ನಡೆದಿಲ್ಲ ಎಂದು ತಿಳಿದುಬಂದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read