alex Certify BREAKING : ಬಿಜೆಪಿ ಶಾಸಕ ಮುನಿರತ್ನಗೆ 1 ದಿನ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬಿಜೆಪಿ ಶಾಸಕ ಮುನಿರತ್ನಗೆ 1 ದಿನ ನ್ಯಾಯಾಂಗ ಬಂಧನ, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ.!

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ 1 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ.

ಬಿಜೆಪಿ ಶಾಸಕ ಮುನಿರತ್ನರನ್ನು ಪೊಲೀಸರು ಬೆಂಗಳೂರಿನ 82 ನೇ ಸಿಸಿಹೆಚ್ ಕೋರ್ಟ್ ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮುನಿರತ್ನಗೆ 1 ದಿನ ನ್ಯಾಯಾಂಗ ಬಂಧನ ವಿಧಿಸಿದೆ ಹಾಗೂ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

ಗುತ್ತಿಗೆದಾರ ಚಲುವರಾಜುಗೆ ಜೀವ ಬೆದರಿಕೆ, ಅವಾಚ್ಯ ಪದಗಳಿಂದ ನಿಂದನೆ ಹಾಗೂ ಮಾಜಿ ಕಾರ್ಪೊರೇಟರ್ ವಿರುದ್ಧ ಜಾತಿ ನಿಂದನೆ ಪ್ರಕರಣ ಸಂಬಂಧ ಬೆಂಗಳೂರಿನ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಎರಡು ಎಫ್ ಐಆರ್ ದಾಖಲಾಗಿತ್ತು. ಗುತ್ತಿಗೆದಾರನ ಜೊತೆ ಮಾತನಾಡಿದ್ದಾರೆ ಎನ್ನಲಾದ ಮುನಿರತ್ನ ಆಡಿಯೋ ಕೂಡ ವೈರಲ್ ಆಗಿತ್ತು. ಈ ಪ್ರಕರಣ ಸಂಬಂಧ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...