alex Certify BIG NEWS: ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಸಕ ಮುನಿರತ್ನ ಪ್ರಕರಣ: ತನಿಖೆಗೆ SIT ರಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮಾಡಿರುವ ಜಾತಿ ನಿಂದನೆ, ಜೀವ ಬೆದರಿಕೆ ಪ್ರಕರಣ ಹಾಗೂ ಅತ್ಯಾಚಾರ, ಹನಿಟ್ರ್ಯಾಪ್ ಕೇಸ್ ತನಿಖೆಗೆ ಎಸ್ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರು, ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಿಎಂ ಭೇಟಿಯಾದ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ನಿಯೋಗ, ಮುನಿರತ್ನ ವಿರುದ್ಧ ತನಿಖೆಗೆ ಎಸ್ಐಟಿ ರಚಿಸುವಂತೆ ಮನವಿ ಮಾಡಿದರು.

ಮುನಿರತ್ನ ವಿರುದ್ಧ ದಾಖಲಾಗಿರುವ ಎಲ್ಲಾ ಪ್ರಕರಣಗಳ ಬಗ್ಗೆಯೂ ಎಸ್ಐಟಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಗೃಹ ಸಚಿವರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...