alex Certify ರಾಜ್ಯದ ‘ಹಿಂದುಳಿದ ವರ್ಗ’ದ ವಿದ್ಯಾರ್ಥಿಗಳ ಗಮನಕ್ಕೆ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ‘ಹಿಂದುಳಿದ ವರ್ಗ’ದ ವಿದ್ಯಾರ್ಥಿಗಳ ಗಮನಕ್ಕೆ : ‘ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.!

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ಅವಧಿಯನ್ನು ಅಕ್ಟೋಬರ್ 15ರ ವರಗೆ ವಿಸ್ತರಿಸಲಾಗಿದ್ದು, ಅರ್ಜಿಯನ್ನು www.ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‌ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್
postmartichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...