BIG NEWS: ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಕೆಎಂಎಫ್ ‘ನಂದಿನಿ ತುಪ್ಪ’ಕ್ಕೆ ಭಾರಿ ಡಿಮ್ಯಾಂಡ್

ಬೆಂಗಳೂರು: ಕರ್ನಾಟಕದ ಕೆಎಂಎಫ್ ನಂದಿನಿ ತುಪ್ಪಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ತಿರುಪತಿ ಲಡ್ಡು ವಿವಾದದ ಬೆನ್ನೆಲ್ಲೇ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಿದೆ.

ಮತ್ತಷ್ಟು ನಂದಿನಿ ತುಪ್ಪ ಪೂರೈಕೆ ಮಾಡುವಂತೆ ಕೆಎಂಎಫ್ ಗೆ ಟಿಟಿಡಿ ಮನವಿ ಮಾಡಿಕೊಂಡಿದೆ. ಇ-ಮೇಲ್ ಮೂಲಕ ಟಿಟಿಡಿಯಿಂದ ಮನವಿ ಸಲ್ಲಿಸಲಾಗಿದೆ. ಹೀಗಾಗಿ ಕೆಎಂಎಫ್ ನಿಂದ ತಿರುಪತಿಗೆ ಮತ್ತಷ್ಟು ನಂದಿನಿ ತುಪ್ಪ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಾಜ್ಯದ ಮುಜರಾಯಿ ದೇವಾಲಯಗಳಿಗೂ ನಂದಿನಿ ತುಪ್ಪ ಪೂರೈಕೆ ಮಾಡಲಾಗುವುದು. ಜೊತೆಗೆ ಬೇರೆ ರಾಜ್ಯಗಳಿಂದಲೂ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ.

ಪ್ರತಿದಿನ 15 ಲಕ್ಷ ಲೀಟರ್ ಹಾಲಿನಿಂದ ನಂದಿನಿ ತುಪ್ಪ ತಯಾರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ತಿರುಪತಿಗೆ ನಂದಿನಿ ತುಪ್ಪ ಸಾಗಿಸುವ ವಾಹನಗಳಿಗೆ ಜಿಪಿಎಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಲ್ಯಾಬ್ ಪರೀಕ್ಷೆ ಮಾಡಿದ ಬಳಿಕ ನಂದಿನಿ ತುಪ್ಪ ಪೂರೈಸಲಾಗುವುದು. ಈ ಹಿಂದೆ ಇದ್ದ ಸರ್ಕಾರದಲ್ಲಿ ಟಿಟಿಡಿಗೆ ತುಪ್ಪ ಪೂರೈಕೆ ಮಾಡಿರಲಿಲ್ಲ.

ಇದೀಗ ಟಿಟಿಡಿ ಬೇಡಿಕೆಯ ಮೇರೆಗೆ ನಂದಿನಿ ತುಪ್ಪ ಪೂರೈಕೆ ಮಾಡಲಾಗುತ್ತಿದೆ. ಈ ಹಿಂದೆ ತಿರುಪತಿಗೆ ಯಾಕೆ ತುಪ್ಪ ಪೂರೈಸುತ್ತಿಲ್ಲ ಎಂದು ಹೇಳುತ್ತಿದ್ದರು. ಇಂದು ತಿಮ್ಮಪ್ಪನ ಕೃಪೆಯಿಂದ ಹೆಚ್ಚು ತಪ್ಪ ಪೂರೈಕೆ ಮಾಡುತ್ತಿದ್ದೇವೆ ಇದು ಕೆಎಂಎಫ್ ನ ಹೆಮ್ಮೆ ಎಂದು ಎಂಡಿ ಜಗದೀಶ್ ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read