alex Certify ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಯುವಕನಿಗೆ ಥಳಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ: ಯುವಕನಿಗೆ ಥಳಿತ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಲ್ಲಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ವಿದ್ಯಾರ್ಥಿಗಳ ಗುಂಪು ಥಳಿಸಿದೆ.

ಪಳ್ಳಂಗೋಡಿನ ಮೊಹಮ್ಮದ್ ನಿಯಾಜ್ ಅನುಚಿತವಾಗಿ ವರ್ತಿಸಿದ ಆರೋಪಿ. ಸುಳ್ಯ ಕಾಲೇಜು ವಿದ್ಯಾರ್ಥಿನಿ ಬೆಂಗಳೂರಿನಿಂದ ಬರುತ್ತಿದ್ದ ಬಸ್ ಅನ್ನು ಬಿಸಿಲೆ ಘಾಟಿಯಲ್ಲಿ ಹತ್ತಿದ್ದಾಳೆ. ಆತ ಕುಳಿತಿದ್ದ ಪಕ್ಕದ ಸೀಟ್ ಖಾಲಿ ಇದ್ದ ಕಾರಣ ಅಲ್ಲೇ ಕುಳಿತುಕೊಂಡಿದ್ದು, ಸ್ವಲ್ಪ ದೂರ ಬಸ್ ಸಾಗಿದ ನಂತರ ನಿಯಾಜ್ ಅನುಚಿತವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿ ಬಸ್ ನಿರ್ವಾಹಕನಿಗೆ ವಿಷಯ ತಿಳಿಸಿದ್ದು, ಸಹ ಪ್ರಯಾಣಿಕರು ಕೂಡ ನಿಯಾಜ್ ನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಯುವತಿ ಅದೇ ಬಸ್ ನಲ್ಲಿ ಸುಳ್ಯಕ್ಕೆ ಆಗಮಿಸಿದ್ದು, ನಿಯಾಜ್ ಸುಬ್ರಹ್ಮಣ್ಯದಲ್ಲಿ ಇಳಿದು ಮತ್ತೊಂದು ಬಸ್ ನಲ್ಲಿ ಸುಳ್ಯಕ್ಕೆ ಬಂದು ಪೈಚಾರಿನಲ್ಲಿ ಇಳಿದಿದ್ದಾನೆ. ವಿದ್ಯಾರ್ಥಿನಿ ತನ್ನ ಸಹಪಾಠಿಗಳಿಗೆ ವಿಷಯ ತಿಳಿಸಿದ್ದು, ವಿದ್ಯಾರ್ಥಿಗಳ ಗುಂಪು ಸುಳ್ಯದಲ್ಲಿ ಮೊಹಮ್ಮದ್ ನಿಯಾಜ್ ಗೆ ಥಳಿಸಿದೆ. ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...