alex Certify ಭಾರಿ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ: ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆಗೆ ಕುಸಿದ ಮನೆಯ ಮೇಲ್ಛಾವಣಿ: ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯ ರಕ್ಷಣೆ

ಗಂಗಾವತಿ: ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಧಾರಾಕಾರ ಮಳೆಯಿಂದಾಗಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ವ್ಯಕ್ತಿಯೋರ್ವ ಮಣ್ಣಿನಡಿ ಸಿಲುಕಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಮದಲ್ಲಿ ನಡೆದಿದೆ.

ಪ್ರಕಾಶ್ ಮಣ್ಣಿನಡಿ ಸಿಲುಕಿರುವ ವ್ಯಕಿ. ಮಣ್ಣಿನಡಿ ಸಿಲುಕಿ ನರಳಾಡುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಗಂಗಾವತಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ವ್ಯಕ್ತಿಯ ದೇಹದ ಮುಕ್ಕಾಲು ಭಾಗ ಮಣ್ಣಿನಲ್ಲಿ ಹೂತು ಹೋಗಿತ್ತು. ಸ್ಥಳೀಯರು ಹರಸಾಹಸಪಟ್ಟು ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...