alex Certify ಮುಸ್ಲಿಂ ಯುವಕರಿಂದ ಮಾದರಿ ಕಾರ್ಯ: ಮೃತ ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಸ್ಲಿಂ ಯುವಕರಿಂದ ಮಾದರಿ ಕಾರ್ಯ: ಮೃತ ಹಿಂದೂ ವ್ಯಕ್ತಿಯ ಅಂತ್ಯಸಂಸ್ಕಾರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಕ್ಕಮಕ್ಕಿ ಗ್ರಾಮದಲ್ಲಿ ಮೃತ ಹಿಂದೂ ವ್ಯಕ್ತಿಯ ಶವಸಂಸ್ಕಾರಕ್ಕೆ ಮುಸ್ಲಿಂ ಯುವಕರು ಸಹಕಾರ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಸುಮಾರು 20 ವರ್ಷಗಳ ಹಿಂದೆ ಮನೆ ಬಿಟ್ಟು ಬಂದಿದ್ದ ರಾಹುಲ್ ಎಸ್. ನಂದಕುಮಾರ್ ಅವರು ಚಕ್ಕಮಕ್ಕಿ ಗ್ರಾಮದ ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರು ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕುಟುಂಬದ ಯಾರ ಸಂಪರ್ಕವೂ ರಾಹುಲ್ ಅವರಿಗೆ ಇರಲಿಲ್ಲ. ಅವರ ಮೊಬೈಲ್ ಪರಿಶೀಲಿಸಿದ ಯುವಕರು ಸಂಬಂಧಿಕರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಈ ವೇಳೆ ಮೃತ ರಾಹುಲ್ ಗೆ ಇಬ್ಬರು ಪತ್ನಿಯರಿದ್ದು, ಮೊದಲ ಪತ್ನಿ ನಿಧನರಾಗಿರುವುದು ಗೊತ್ತಾಗಿದೆ. ಎರಡನೇ ಪತ್ನಿಗೆ ಕರೆ ಮಾಡಿ ವಿಷಯ ತಿಳಿಸಿದರೂ ಅವರ್ಯಾರು ಅಂತ್ಯ ಸಂಸ್ಕಾರಕ್ಕೆ ಬಂದಿಲ್ಲ. ಕೊನೆಗೆ ಮೊದಲ ಪತ್ನಿಯ ಮಗ ಆಳ್ವಾಸ್ ಕಾಲೇಜಿನಲ್ಲಿ ಓದುತ್ತಿರುವುದನ್ನು ಖಚಿತಪಡಿಸಿಕೊಂಡ ಯುವಕರು ಆತನನ್ನು ಕರೆತಂದು ತಂದೆಯ ಅಂತ್ಯ ಸಂಸ್ಕಾರ ಮಾಡಿಸಿದ್ದಾರೆ. ತಾವೇ ಮೃತದೇಹಕ್ಕೆ ಹೆಗಲು ಕೊಟ್ಟು ಸಹಕಾರ ನೀಡುವ ಮೂಲಕ ಮಾದರಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...