alex Certify ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ವಿಶೇಷ ರೈಲು ಸಂಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ವಿಶೇಷ ರೈಲು ಸಂಚಾರ

ಹುಬ್ಬಳ್ಳಿ: ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸುವ ಉದ್ದೇಶದಿಂದ ವಿಶೇಷ ರೈಲುಗಳ ಸಂಚಾರಕ್ಕೆ ನೈರುತ್ಯ ರೈಲ್ವೆ ವ್ಯವಸ್ಥೆ ಮಾಡಿದೆ.

ಹುಬ್ಬಳ್ಳಿ -ಯಶವಂತಪುರ -ಬೆಳಗಾವಿ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 10ರಂದು ಬೆಳಿಗ್ಗೆ 11:30 ಕ್ಕೆ ಹುಬ್ಬಳ್ಳಿಯಿಂದ ಹೊರಟು ರಾತ್ರಿ 7:40ಕ್ಕೆ ಯಶವಂತಪುರ ತಲುಪಲಿದೆ. ಇದೇ ರೈಲು ಯಶವಂತಪುರದಿಂದ ಅದೇ ದಿನ ರಾತ್ರಿ 8:55 ಕ್ಕೆ ಹೊರಟು ಮರುದಿನ ಬೆಳಗ್ಗೆ 8:15ಕ್ಕೆ ಬೆಳಗಾವಿಗೆ ತಲುಪಲಿದೆ.

ಬೆಳಗಾವಿ -ಮೈಸೂರು -ಹುಬ್ಬಳ್ಳಿ ವಿಶೇಷ ಎಕ್ಸ್ಪ್ರೆಸ್ ರೈಲು ಅಕ್ಟೋಬರ್ 11ರಂದು ಬೆಳಗಾವಿಯಿಂದ ಸಂಜೆ 5.30ಕ್ಕೆ ಹೊರಟು ಮರುದಿನ ಬೆಳಗ್ಗೆ 6.25ಕ್ಕೆ ಮೈಸೂರು ತಲುಪಲಿದೆ. ಅದೇ ರೈಲು ಅಕ್ಟೋಬರ್ 12ರಂದು ಮೈಸೂರಿನಿಂದ ರಾತ್ರಿ 10.30 ಕ್ಕೆ ಹೊರಟು ಮರುದಿನ ಬೆಳಗ್ಗೆ 7 ಗಂಟೆಗೆ ಹುಬ್ಬಳ್ಳಿ ತಲುಪಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...